<p><strong>ಮಾನ್ವಿ:</strong> ಸರ್ಕಾರಿ ಶಿಕ್ಷಕ ಹುದ್ದೆಗೆ ಅರ್ಹತಾ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ನೆರವಾಗಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಪ್ರಸಕ್ತ ವರ್ಷ ಮೊದಲ ಬಾರಿಗೆ ಆಯೋಜಿಸಿರುವ ಉಚಿತ ತರಬೇತಿಗೆ ತಾಲ್ಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಸರ್ಕಾರಿ ಶಿಕ್ಷಕರ ನೇಮಕಾತಿಯಲ್ಲಿ ಈ ಭಾಗದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವಂತೆ ಮಾಡುವ ಮಹತ್ವಾಕಾಂಕ್ಷೆಯಿಂದ ಆರಂಭಿಸಿರುವ ಈ ತರಬೇತಿಗೆ ಅಭ್ಯರ್ಥಿಗಳ ನಿರಾಸಕ್ತಿ ಹಾಗೂ ಹಾಜರಾತಿ ಕೊರತೆ ಕಂಡು ಬಂದಿದೆ.</p>.<p>ಮಾನ್ವಿಯ ಶಾರದಾ ವಿದ್ಯಾನಿಕೇತನ ಬಿ.ಇಡಿ ಕಾಲೇಜಿನ ಉಚಿತ ತರಬೇತಿ ಕೇಂದ್ರದಲ್ಲಿ ಹೆಸರು ನೋಂದಾಯಿಸಿದ 102 ಅಭ್ಯರ್ಥಿಗಳ ಪೈಕಿ ಕೇವಲ 8ಜನ ಅಭ್ಯರ್ಥಿಗಳು ತರಬೇತಿಗೆ ಹಾಜರಾಗಿದ್ದರು.</p>.<p>ಡಿ.2ರಿಂದ ಜ.22ರವರೆಗೆ ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳ 33 ಬಿ.ಇಡಿ ಕಾಲೇಜುಗಳಲ್ಲಿ ಈ ಉಚಿತ ತರಬೇತಿ ಆರಂಭಿಸಲಾಗಿದೆ. ಬಿ.ಇಡಿ ಮತ್ತು ಡಿ.ಇಡಿ ಪದವೀಧರರು, ಬಿ.ಇಡಿ 4ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವವರು ಈ ತರಬೇತಿ ಪಡೆಯಲು ಅರ್ಹತೆ ಹೊಂದಿದ್ದಾರೆ. ಪ್ರತಿ ಬಿ.ಇಡಿ ಕಾಲೇಜಿನ 3 ಪ್ರಾಧ್ಯಾಪಕರನ್ನು ತರಬೇತಿಯ ಸಂಪನ್ಮೂಲ<br />ವ್ಯಕ್ತಿಗಳನ್ನಾಗಿ ಆಯ್ಕೆ ಮಾಡಿ ಕಲಬುರ್ಗಿಯಲ್ಲಿ 2 ದಿನಗಳ ವಿಶೇಷ ತರಬೇತಿ ನೀಡಲಾಗಿದೆ. ಬಿ.ಇಡಿ ಕಾಲೇಜಿನ ಪ್ರಾಂಶುಪಾಲರನ್ನು ತರಬೇತಿ ಕೇಂದ್ರದ ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.</p>.<p>ಟಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಪ್ರತಿ ದಿನ ಸಂಜೆ 4.30ರಿಂದ 7.30ರವರೆಗೆ ಬೋಧಿಸಲಾಗುತ್ತಿದೆ. ತರಬೇತಿಗೆ ನಿಗದಿ ಮಾಡಿರುವ ಸಮಯ ಹಾಗೂ ವಿಷಯಗಳ ಆಯ್ಕೆ ಅಭ್ಯರ್ಥಿಗಳ ಗೈರು ಹಾಜರಿಗೆ ಕಾರಣ ಎಂದು ತಿಳಿದು ಬಂದಿದೆ.</p>.<p>ಸಂಜೆ ವೇಳೆ ತರಬೇತಿಗೆ ಹಾಜರಾಗಲು ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಬಸ್ ಸಮಸ್ಯೆ ಕಾರಣವಾಗಿದೆ. ಸಂಜೆ 7.30ರವರೆಗೆ ತರಬೇತಿ ನಡೆಯುವ ಕಾರಣ ಗ್ರಾಮೀಣ ಭಾಗದ ಆಸಕ್ತ ಮಹಿಳಾ ಅಭ್ಯರ್ಥಿಗಳು ಸುರಕ್ಷತಾ ದೃಷ್ಟಿಯಿಂದ ತರಬೇತಿಗೆ ಬರಲು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ.</p>.<p>ಕೇವಲ ವಿಜ್ಞಾನ ಹಾಗೂ ಇಂಗ್ಲಿಷ್ ಶಿಕ್ಷಕ ಹುದ್ದೆಗಳ ನೇಮಕಾತಿಗೆ ನೆರವಾಗುವ ವಿಷಯಗಳನ್ನು ಬೋಧಿಸಲಾಗುತ್ತಿದೆ. ಶೈಕ್ಷಣಿಕ ಮನೋವಿಜ್ಞಾನ, ಸಮಾಜ ವಿಜ್ಞಾನ ಮತ್ತು ಕನ್ನಡ ವಿಷಯಗಳ ಬಗ್ಗೆಯೂ ತರಬೇತಿ ನೀಡಬೇಕು ಎಂದು ಪದವೀಧರರು ಒತ್ತಾಯಿಸಿದ್ದಾರೆ.</p>.<p>ಸ್ಥಳೀಯ ಮಟ್ಟದಲ್ಲಿ ಟಿಇಟಿಗೆ ಉಚಿತ ತರಬೇತಿ ಆರಂಭಿಸಿರುವ ಕುರಿತು ಅನೇಕ ಅಭ್ಯರ್ಥಿಗಳಿಗೆ ಮಾಹಿತಿ ಇಲ್ಲ. ಈ ಕುರಿತು ಸೂಕ್ತ ಪ್ರಚಾರ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬುದು ಸ್ಥಳೀಯರ ದೂರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ಸರ್ಕಾರಿ ಶಿಕ್ಷಕ ಹುದ್ದೆಗೆ ಅರ್ಹತಾ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ನೆರವಾಗಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಪ್ರಸಕ್ತ ವರ್ಷ ಮೊದಲ ಬಾರಿಗೆ ಆಯೋಜಿಸಿರುವ ಉಚಿತ ತರಬೇತಿಗೆ ತಾಲ್ಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಸರ್ಕಾರಿ ಶಿಕ್ಷಕರ ನೇಮಕಾತಿಯಲ್ಲಿ ಈ ಭಾಗದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವಂತೆ ಮಾಡುವ ಮಹತ್ವಾಕಾಂಕ್ಷೆಯಿಂದ ಆರಂಭಿಸಿರುವ ಈ ತರಬೇತಿಗೆ ಅಭ್ಯರ್ಥಿಗಳ ನಿರಾಸಕ್ತಿ ಹಾಗೂ ಹಾಜರಾತಿ ಕೊರತೆ ಕಂಡು ಬಂದಿದೆ.</p>.<p>ಮಾನ್ವಿಯ ಶಾರದಾ ವಿದ್ಯಾನಿಕೇತನ ಬಿ.ಇಡಿ ಕಾಲೇಜಿನ ಉಚಿತ ತರಬೇತಿ ಕೇಂದ್ರದಲ್ಲಿ ಹೆಸರು ನೋಂದಾಯಿಸಿದ 102 ಅಭ್ಯರ್ಥಿಗಳ ಪೈಕಿ ಕೇವಲ 8ಜನ ಅಭ್ಯರ್ಥಿಗಳು ತರಬೇತಿಗೆ ಹಾಜರಾಗಿದ್ದರು.</p>.<p>ಡಿ.2ರಿಂದ ಜ.22ರವರೆಗೆ ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳ 33 ಬಿ.ಇಡಿ ಕಾಲೇಜುಗಳಲ್ಲಿ ಈ ಉಚಿತ ತರಬೇತಿ ಆರಂಭಿಸಲಾಗಿದೆ. ಬಿ.ಇಡಿ ಮತ್ತು ಡಿ.ಇಡಿ ಪದವೀಧರರು, ಬಿ.ಇಡಿ 4ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವವರು ಈ ತರಬೇತಿ ಪಡೆಯಲು ಅರ್ಹತೆ ಹೊಂದಿದ್ದಾರೆ. ಪ್ರತಿ ಬಿ.ಇಡಿ ಕಾಲೇಜಿನ 3 ಪ್ರಾಧ್ಯಾಪಕರನ್ನು ತರಬೇತಿಯ ಸಂಪನ್ಮೂಲ<br />ವ್ಯಕ್ತಿಗಳನ್ನಾಗಿ ಆಯ್ಕೆ ಮಾಡಿ ಕಲಬುರ್ಗಿಯಲ್ಲಿ 2 ದಿನಗಳ ವಿಶೇಷ ತರಬೇತಿ ನೀಡಲಾಗಿದೆ. ಬಿ.ಇಡಿ ಕಾಲೇಜಿನ ಪ್ರಾಂಶುಪಾಲರನ್ನು ತರಬೇತಿ ಕೇಂದ್ರದ ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.</p>.<p>ಟಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಪ್ರತಿ ದಿನ ಸಂಜೆ 4.30ರಿಂದ 7.30ರವರೆಗೆ ಬೋಧಿಸಲಾಗುತ್ತಿದೆ. ತರಬೇತಿಗೆ ನಿಗದಿ ಮಾಡಿರುವ ಸಮಯ ಹಾಗೂ ವಿಷಯಗಳ ಆಯ್ಕೆ ಅಭ್ಯರ್ಥಿಗಳ ಗೈರು ಹಾಜರಿಗೆ ಕಾರಣ ಎಂದು ತಿಳಿದು ಬಂದಿದೆ.</p>.<p>ಸಂಜೆ ವೇಳೆ ತರಬೇತಿಗೆ ಹಾಜರಾಗಲು ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಬಸ್ ಸಮಸ್ಯೆ ಕಾರಣವಾಗಿದೆ. ಸಂಜೆ 7.30ರವರೆಗೆ ತರಬೇತಿ ನಡೆಯುವ ಕಾರಣ ಗ್ರಾಮೀಣ ಭಾಗದ ಆಸಕ್ತ ಮಹಿಳಾ ಅಭ್ಯರ್ಥಿಗಳು ಸುರಕ್ಷತಾ ದೃಷ್ಟಿಯಿಂದ ತರಬೇತಿಗೆ ಬರಲು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ.</p>.<p>ಕೇವಲ ವಿಜ್ಞಾನ ಹಾಗೂ ಇಂಗ್ಲಿಷ್ ಶಿಕ್ಷಕ ಹುದ್ದೆಗಳ ನೇಮಕಾತಿಗೆ ನೆರವಾಗುವ ವಿಷಯಗಳನ್ನು ಬೋಧಿಸಲಾಗುತ್ತಿದೆ. ಶೈಕ್ಷಣಿಕ ಮನೋವಿಜ್ಞಾನ, ಸಮಾಜ ವಿಜ್ಞಾನ ಮತ್ತು ಕನ್ನಡ ವಿಷಯಗಳ ಬಗ್ಗೆಯೂ ತರಬೇತಿ ನೀಡಬೇಕು ಎಂದು ಪದವೀಧರರು ಒತ್ತಾಯಿಸಿದ್ದಾರೆ.</p>.<p>ಸ್ಥಳೀಯ ಮಟ್ಟದಲ್ಲಿ ಟಿಇಟಿಗೆ ಉಚಿತ ತರಬೇತಿ ಆರಂಭಿಸಿರುವ ಕುರಿತು ಅನೇಕ ಅಭ್ಯರ್ಥಿಗಳಿಗೆ ಮಾಹಿತಿ ಇಲ್ಲ. ಈ ಕುರಿತು ಸೂಕ್ತ ಪ್ರಚಾರ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬುದು ಸ್ಥಳೀಯರ ದೂರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>