ಕವಿತಾಳ: ಬೇಸಿಗೆ ರಜೆ ದಿನಗಳಲ್ಲಿ ಶಾಲಾ ಮಕ್ಕಳಿಗಾಗಿ ಶಿಕ್ಷಣ ಇಲಾಖೆ ಆರಂಭಿಸಿದ ಬರಗಾಲದ ಬಿಸಿಯೂಟ ಯೋಜನೆಗೆ ಮಕ್ಕಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ಪಾಲಕರು ಗುಳೇ ಹೋಗಿದ್ದಾರೆ, ಪಾಲಕರನ್ನು ಬಿಟ್ಟು ಹಳ್ಳಿಗಳಲ್ಲಿರುವ ಮಕ್ಕಳಿಗೆ ಬರಗಾಲದ ಬಿಸಿಯೂಟ ಅನುಕೂಲವಾಗಿದೆ. ಬೇಸಿಗೆ ರಜೆಯಲ್ಲಿ ಎಲ್ಲೆಲ್ಲೊ ಹೊರಗಡೆ ಬಿಸಿಲಲ್ಲಿ ಅಲೆಯುತ್ತಿದ್ದ ಮಕ್ಕಳು ಈಗ ಶಾಲೆಗೆ ಬಂದು ಊಟ ಮಾಡಿ ಹೋಗುತ್ತಿದ್ದಾರೆ,