2008 ರಲ್ಲಿ ಶಾಸಕರಾದ ವೆಂಕಟರಾವ್ ನಾಡಗೌಡ ಕನ್ನಡ ಸಂಸ್ಕೃತಿ ಇಲಾಖೆ, ರಾಜ್ಯಸಭಾ ಸದಸ್ಯರ ಅನುದಾನ, ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ರಂಗಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ನಿರ್ಮಿತಿ ಕೇಂದ್ರದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಹಲವು ಕಾಮಗಾರಿಗಳಲ್ಲಿ ನಿರ್ಮಿತಿ ಕೇಂದ್ರ ಭಾರೀ ಪ್ರಮಾಣದಲ್ಲಿ ಅವ್ಯವಹಾರ ಮಾಡಿದೆ ಎನ್ನುವ ಪ್ರಕರಣ ಸಿಬಿಐ ಮೆಟ್ಟಿಲೇರಿದ ಕಾರಣ ರಂಗಮಂದಿರದ ನಿರ್ಮಾಣ ಕಾಮಗಾರಿಯ ಪ್ರಗತಿ ಸ್ಥಗಿತಗೊಂಡಿತ್ತು.