ಯಾವ ಕಾರಣಕ್ಕೆ ಮೀನುಗಳು ಮೃತಪಟ್ಟಿವೆ ಎಂಬುದನ್ನು ಮೀನುಗಾರಿ ಇಲಾಖೆ ಮತ್ತು ಪರಿಸರ ಮಾಲಿನ್ಯ ಅಧಿಕಾರಿಗಳು ಪರಿಶೀಲಿಸಿ ಖಚಿತಪಡಿಸಬೇಕು. ಇದು ಕೂಡ ಸಾಂಕ್ರಾಮಿಕ ರೋಗ ಹರಡಲು ಕಾರಣವಾಗಬಹುದು. ಅದನ್ನು ತಪ್ಪಿಸಲು ಕೂಡಲೇ ಮೀನುಗಳನ್ನು ಹೊರಗೆ ತೆಗೆಸಲು ಮುಂದಾಗಬೇಕು. ಈ ಮೂಲಕ ಇಲ್ಲಿನ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಕೋರಿದ್ದಾರೆ.