‘ತೀವ್ರ ಜ್ವರ, ವಿಪರೀತ ಸುಸ್ತು, ಆಹಾರ ಸೇವಿಸದಿರುವುದು ಮೂತ್ರದಲ್ಲಿ ರಕ್ತ ಬರುವುದು, ಮೂಗಿನಲ್ಲಿ ಬಿಳಿ ದ್ರವ ಸುರಿದು ಕೆಲವೇ ಕ್ಷಣಗಳಲ್ಲಿ ನೆಲಕ್ಕೆ ಕುಸಿದು ಕುರಿಗಳು ಸಾಯುತ್ತಿವೆ. ಯಾವುದೇ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ. ಹೀಗಾಗಿ ಜೀವನೋಪಾಯಕ್ಕೆ ಕುರಿ ಸಾಕಾಣಿಕೆ ಮಾಡಿದ ಕುರಿಗಾಹಿಗಳು, ಸಣ್ಣ ರೈತರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ’ ಎಂದು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಿವಣ್ಣ ವಕೀಲ ಹೇಳಿದರು.