ಆ ನಂತರ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಇದುವರೆಗೆ ಜಿಲ್ಲೆಗೆ ಮಂಜುರಾದ ಹಲವಾರು ಅವಕಾಶಗಳು, ಸೌಲಭ್ಯಗಳು ಬೇರೆ ಜಿಲ್ಲೆಗಳ ಪಾಲಾಗಿವೆ. ಜಿಲ್ಲೆಯು ಹತ್ತಿ, ಭತ್ತ ಬೆಳೆ ಹೆಚ್ಚಾಗಿ ಬೆಳೆಯುವ ಮೂಲಕ ಪ್ರಸಿದ್ಧಿ ಪಡೆದಿದ್ದು, ಆದರೂ ಅಭಿವೃದ್ಧಿಯಲ್ಲಿ ಕಲ್ಯಾಣ ಕರ್ನಾಟಕದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಅಪಖ್ಯಾತಿಗೆ ಗುರಿಯಾಗಿದೆ ಎಂದರು.