<p><strong>ಮುದಗಲ್:</strong> ಪಟ್ಟಣದ ಮೇಗಳಪೇಟೆ ಬಡಾವಣೆಯ ಮನೆಯೊಂದಕ್ಕೆ ಹಾಡಹಗಲೇ ನುಗ್ಗಿರುವ ಕಳ್ಳನೊಬ್ಬ, ಮನೆಯಲ್ಲೇ ಇದ್ದ ಮಾಲೀಕನ ತಲೆಗೆ ಕಬ್ಬಿಣದ ರಾಡಿನಿಂದ ಒಡೆದು ಬಂಗಾರ ಹಾಗೂ ಹಣ ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.</p>.<p>ನೀಲಪ್ಪ ಗದ್ದೆಪ್ಪ ಹುಣಸಗಿಡ ಹಲ್ಲೆಗೆ ಒಳಗಾದವರು. ಮನೆ ಒಳ ಹೊಕ್ಕ ಕಳ್ಳನನ್ನು ನೀಲಪ್ಪ ಪ್ರಶ್ನಿಸಿದ್ದಾರೆ. ಈ ವೇಳೆ ವೇಳೆ ಕಳ್ಳ ಕಬ್ಬಿಣದ ರಾಡಿನಿಂದ ನಿಂಗಪ್ಪ ಅವರ ತಲೆಗೆ ಬಲವಾಗಿ ಹೊಡೆದು ಪರಾರಿಯಾಗಿದ್ದಾರೆ.</p>.<p>ಗಂಭೀರ ಗಾಯಗೊಂಡಿರುವ ನಿಂಗಪ್ಪ ಅವರು ಇಲ್ಲಿನ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಡಾವಣೆಯಲ್ಲಿ ಶ್ವಾನ ದಳದಿಂದ ಪರಿಶೀಲನೆ ನಡೆಸಿತು.</p>.<p>ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ ಭೇಟಿ ನೀಡಿ ಮಾಹಿತಿ ಪಡೆದರು. ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ಮಸ್ಕಿ ಸಿಪಿಐ ಬಾಲಚಂದ್ರ ಲಕಂ, ಮುದಗಲ್ ಪಿಎಸ್ಐ ವೆಂಕಟೇಶ ಮಾಡಿಗೇರಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದಗಲ್:</strong> ಪಟ್ಟಣದ ಮೇಗಳಪೇಟೆ ಬಡಾವಣೆಯ ಮನೆಯೊಂದಕ್ಕೆ ಹಾಡಹಗಲೇ ನುಗ್ಗಿರುವ ಕಳ್ಳನೊಬ್ಬ, ಮನೆಯಲ್ಲೇ ಇದ್ದ ಮಾಲೀಕನ ತಲೆಗೆ ಕಬ್ಬಿಣದ ರಾಡಿನಿಂದ ಒಡೆದು ಬಂಗಾರ ಹಾಗೂ ಹಣ ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.</p>.<p>ನೀಲಪ್ಪ ಗದ್ದೆಪ್ಪ ಹುಣಸಗಿಡ ಹಲ್ಲೆಗೆ ಒಳಗಾದವರು. ಮನೆ ಒಳ ಹೊಕ್ಕ ಕಳ್ಳನನ್ನು ನೀಲಪ್ಪ ಪ್ರಶ್ನಿಸಿದ್ದಾರೆ. ಈ ವೇಳೆ ವೇಳೆ ಕಳ್ಳ ಕಬ್ಬಿಣದ ರಾಡಿನಿಂದ ನಿಂಗಪ್ಪ ಅವರ ತಲೆಗೆ ಬಲವಾಗಿ ಹೊಡೆದು ಪರಾರಿಯಾಗಿದ್ದಾರೆ.</p>.<p>ಗಂಭೀರ ಗಾಯಗೊಂಡಿರುವ ನಿಂಗಪ್ಪ ಅವರು ಇಲ್ಲಿನ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಡಾವಣೆಯಲ್ಲಿ ಶ್ವಾನ ದಳದಿಂದ ಪರಿಶೀಲನೆ ನಡೆಸಿತು.</p>.<p>ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ ಭೇಟಿ ನೀಡಿ ಮಾಹಿತಿ ಪಡೆದರು. ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ಮಸ್ಕಿ ಸಿಪಿಐ ಬಾಲಚಂದ್ರ ಲಕಂ, ಮುದಗಲ್ ಪಿಎಸ್ಐ ವೆಂಕಟೇಶ ಮಾಡಿಗೇರಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>