<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ಇಲ್ಲಿಯ ಇಳಕಲ್ಲ ವಿಜಯ ಮಹಾಂತೇಶ್ವರ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಅಪರಿಚಿತರಿಬ್ಬರು ₹40 ಲಕ್ಷ ಮೌಲ್ಯದ ನಗನಾಣ್ಯ ಲೂಟಿ ಮಾಡಿ ಪರಾರಿಯಾಗಿದ್ದಾರೆ.</p>.<p>ಗುರುವಾರ ಮಧ್ಯರಾತ್ರಿ ಮಠಕ್ಕೆ ಬಂದಿದ್ದ ಅಪರಿಚಿತ ವ್ಯಕ್ತಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕೈಯಲ್ಲಿ ಪಿಸ್ತೂಲ್ ಹಿಡಿದು ಜೀವ ಬೆದರಿಕೆ ಹಾಕುವ ಮೂಲಕ ಕಪಾಟು ಹಾಗೂ ಟ್ರಂಕ್ ಗಳಲ್ಲಿದ್ದ 7 ತೊಲ ಚಿನ್ನ, 10 ಕೆ.ಜಿ ಬೆಳ್ಳಿ, ಅಂದಾಜು ₹20 ಲಕ್ಷ ನಗದು ದೋಚಿಕೊಂಡು ಹೋಗಿದ್ದಾರೆ.</p><p>ಪಾದ ಮತ್ತು ಇಷ್ಟಲಿಂಗ ಪೂಜೆಗೆ ಬಳಸುವ ಬೆಳ್ಳಿ ಸಾಮಗ್ರಿಗಳು, ಚಿನ್ನದ ಕರಡಿಗೆ ಮತ್ತು ಸುತ್ತುಂಗುರಗಳನ್ನು ಲೂಟಿ ಮಾಡಿಕೊಂಡು ಹೋಗಿದ್ದಾರೆ ಎಂದು ಶಾಖಾ ಮಠದ ಸಿದ್ಧಲಿಂಗ ಸ್ವಾಮೀಜಿ ಪೊಲೀಸರಿಗೆ ದೂರು ನೀಡಿದ್ದಾರೆ.</p><p>ಪೊಲೀಸ್ ಇನ್ಸ್ಸ್ಪೆಕ್ಟರ್ ಪುಂಡಲಿಕ್ ಪಟತ್ತರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶಬಾಬು , ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಸ್ಥಳಕ್ಕೇ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ):</strong> ಇಲ್ಲಿಯ ಇಳಕಲ್ಲ ವಿಜಯ ಮಹಾಂತೇಶ್ವರ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಅಪರಿಚಿತರಿಬ್ಬರು ₹40 ಲಕ್ಷ ಮೌಲ್ಯದ ನಗನಾಣ್ಯ ಲೂಟಿ ಮಾಡಿ ಪರಾರಿಯಾಗಿದ್ದಾರೆ.</p>.<p>ಗುರುವಾರ ಮಧ್ಯರಾತ್ರಿ ಮಠಕ್ಕೆ ಬಂದಿದ್ದ ಅಪರಿಚಿತ ವ್ಯಕ್ತಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕೈಯಲ್ಲಿ ಪಿಸ್ತೂಲ್ ಹಿಡಿದು ಜೀವ ಬೆದರಿಕೆ ಹಾಕುವ ಮೂಲಕ ಕಪಾಟು ಹಾಗೂ ಟ್ರಂಕ್ ಗಳಲ್ಲಿದ್ದ 7 ತೊಲ ಚಿನ್ನ, 10 ಕೆ.ಜಿ ಬೆಳ್ಳಿ, ಅಂದಾಜು ₹20 ಲಕ್ಷ ನಗದು ದೋಚಿಕೊಂಡು ಹೋಗಿದ್ದಾರೆ.</p><p>ಪಾದ ಮತ್ತು ಇಷ್ಟಲಿಂಗ ಪೂಜೆಗೆ ಬಳಸುವ ಬೆಳ್ಳಿ ಸಾಮಗ್ರಿಗಳು, ಚಿನ್ನದ ಕರಡಿಗೆ ಮತ್ತು ಸುತ್ತುಂಗುರಗಳನ್ನು ಲೂಟಿ ಮಾಡಿಕೊಂಡು ಹೋಗಿದ್ದಾರೆ ಎಂದು ಶಾಖಾ ಮಠದ ಸಿದ್ಧಲಿಂಗ ಸ್ವಾಮೀಜಿ ಪೊಲೀಸರಿಗೆ ದೂರು ನೀಡಿದ್ದಾರೆ.</p><p>ಪೊಲೀಸ್ ಇನ್ಸ್ಸ್ಪೆಕ್ಟರ್ ಪುಂಡಲಿಕ್ ಪಟತ್ತರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶಬಾಬು , ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಸ್ಥಳಕ್ಕೇ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>