<p><strong>ರಾಯಚೂರು: </strong>75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಅಂಗವಾಗಿ ನಗರದ ಕರ್ನಾಟಕ ಸಂಘದ ಕಚೇರಿಯಿಂದ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದವರೆಗೆ ಒಂದುಸಾವಿರ ಅಡಿ ಉದ್ದದ ರಾಷ್ಟ್ರ ಧ್ವಜದ ಭವ್ಯ ಮೆರವಣಿಗೆ ಭಾನುವಾರ ಜರುಗಿತು</p>.<p>ಶಾಸಕ ಡಾ.ಶಿವರಾಜ ಪಾಟೀಲ ಮೆರವಣಿಗೆಗೆ ಚಾಲನೆ ನೀಡಿದರು. ಕರ್ನಾಟಕ ಸಂಘದಿಂದ ಹನುಮಾನ್ ಚಿತ್ರ ಮಂದಿರ, ಸದರ್ ಬಜಾರ್ ಪೊಲೀಸ್ ಠಾಣೆ, ತೀನ್ ಖಂದಿಲ್ ವೃತ್ತ, ನಗರಸಭೆ, ಬಸ್ ನಿಲ್ದಾಣದ ಮಾರ್ಗವಾಗಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದವರೆಗೆ ಭವ್ಯ ಮೆರವಣಿಗೆ ನಡೆಯಿತು.</p>.<p>ಮೆರವಣಿಗೆಯಲ್ಲಿ ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಸಘ ಸಂಸ್ಥೆಗಳ ಮುಖಂಡರು ಭಾಗವಹಿಸಿ ಭಾರತ ಮಾತೆಗೆ ಜಯ ಘೋಷಣೆ ಹಾಕುತ್ತಾ, ದೇಶ ಭಕ್ತಿ ಗೀತೆಗಳನ್ನು ಹಾಡುತ್ತಾ ಸಾಗಿದರು.</p>.<p>ಮೆರವಣಿಗೆಯಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಬಿಜೆಪಿಯ ಮುಖಂಡ ಎನ್ ಶಂಕ್ರಪ್ಪ, ಜಿಲ್ಲಾಧ್ಯಕ್ಷ ರಮಾನಂದ ಯಾದವ್, ನಗಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿ, ರವೀಂದ್ರ ಜಲ್ದಾರ್, ರಾಜಕುಮಾರ, ನಗರಸಭೆ ಸದಸ್ಯ ಎನ್.ಕೆ.ನಾಗರಾಜ, ಈ.ಶಶಿರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಅಂಗವಾಗಿ ನಗರದ ಕರ್ನಾಟಕ ಸಂಘದ ಕಚೇರಿಯಿಂದ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದವರೆಗೆ ಒಂದುಸಾವಿರ ಅಡಿ ಉದ್ದದ ರಾಷ್ಟ್ರ ಧ್ವಜದ ಭವ್ಯ ಮೆರವಣಿಗೆ ಭಾನುವಾರ ಜರುಗಿತು</p>.<p>ಶಾಸಕ ಡಾ.ಶಿವರಾಜ ಪಾಟೀಲ ಮೆರವಣಿಗೆಗೆ ಚಾಲನೆ ನೀಡಿದರು. ಕರ್ನಾಟಕ ಸಂಘದಿಂದ ಹನುಮಾನ್ ಚಿತ್ರ ಮಂದಿರ, ಸದರ್ ಬಜಾರ್ ಪೊಲೀಸ್ ಠಾಣೆ, ತೀನ್ ಖಂದಿಲ್ ವೃತ್ತ, ನಗರಸಭೆ, ಬಸ್ ನಿಲ್ದಾಣದ ಮಾರ್ಗವಾಗಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದವರೆಗೆ ಭವ್ಯ ಮೆರವಣಿಗೆ ನಡೆಯಿತು.</p>.<p>ಮೆರವಣಿಗೆಯಲ್ಲಿ ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಸಘ ಸಂಸ್ಥೆಗಳ ಮುಖಂಡರು ಭಾಗವಹಿಸಿ ಭಾರತ ಮಾತೆಗೆ ಜಯ ಘೋಷಣೆ ಹಾಕುತ್ತಾ, ದೇಶ ಭಕ್ತಿ ಗೀತೆಗಳನ್ನು ಹಾಡುತ್ತಾ ಸಾಗಿದರು.</p>.<p>ಮೆರವಣಿಗೆಯಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಬಿಜೆಪಿಯ ಮುಖಂಡ ಎನ್ ಶಂಕ್ರಪ್ಪ, ಜಿಲ್ಲಾಧ್ಯಕ್ಷ ರಮಾನಂದ ಯಾದವ್, ನಗಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿ, ರವೀಂದ್ರ ಜಲ್ದಾರ್, ರಾಜಕುಮಾರ, ನಗರಸಭೆ ಸದಸ್ಯ ಎನ್.ಕೆ.ನಾಗರಾಜ, ಈ.ಶಶಿರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>