<p><strong>ರಾಯಚೂರು:</strong> ತಿಂಥಣಿ ಬ್ರಿಜ್ನ ಶ್ರೀಕಾಗಿ ನೆಲೆ ಮಹಾಸಂಸ್ಥಾನ ಕನಕ ಗುರುಪೀಠ ವತಿಯಿಂದ 2025ರ ಜನವರಿ 12 ರಿಂದ 14 ವರೆಗೆ ಹಾಲುಮತ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಗುರುಪೀಠದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ ಹೇಳಿದರು.<br><br> ಮೂರು ದಿನಗಳ ವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ವಿದ್ವಾಂಸರು, ಸಂಶೋಧಕರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಮೊದಲ ದಿನ ಹಾಲುಮತದ ಪಂಥ ಕುರಿತು ಹೈದರಬಾದ್ನ ವಿದ್ವಾಂಸರು ಉಪನ್ಯಾಸ ನೀಡಲಿದ್ದಾರೆ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.<br><br> ಜ.13ರಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ದ್ವಾಕರನಾಥ ಹಾಗೂ 14 ರಂದು ಕನ್ನಡ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಉಪನ್ಯಾಸ ನೀಡಲಿದ್ದಾರೆ. ಸಿದ್ದ ಪರಂಪರೆ, ಬಹುಜನರ ಸಂಸ್ಕೃತಿಗಳ ಅಸ್ತಿತ್ವ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.</p>.<p>ಫೆ.15ರಂದು ಶಿವರಾತ್ರಿ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ, 1108 ಶಿವಲಿಂಗಗಳನ್ನು 1108 ದಂಪತಿಗಳಿಂದ ಪೂಜಿಸುವ ಕಾರ್ಯಕ್ರಮ ನಡೆಯಲಿದೆ. ಕಲಾತಂಡಗಳಿಂದ ಭಕ್ತಿ ಸಂಗೀತ, ನೃತ್ಯ, ನಾಟಕಗಳ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು<br><br> ಲಕ್ಷ್ಮಣ ಗಾಣಧಾಳ, ಮಹಾದೇವಪ್ಪ ಮಿರ್ಜಾಪುರ, ಹನುಮಂತಪ್ಪ ಜಾಲಿಬೆಂಚಿ, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಗುಂಡಪ್ಪ ಸಾಹುಕಾರ, ನಾಗರಾಜ ಮಡ್ಡಿಪೇಟೆ, ಯಶವಂತ, ಶೇಖರ ವಾರದ, ಹನುಮಂತಪ್ಪ, ಬಸಯ್ಯ ಸಾಹುಕಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ತಿಂಥಣಿ ಬ್ರಿಜ್ನ ಶ್ರೀಕಾಗಿ ನೆಲೆ ಮಹಾಸಂಸ್ಥಾನ ಕನಕ ಗುರುಪೀಠ ವತಿಯಿಂದ 2025ರ ಜನವರಿ 12 ರಿಂದ 14 ವರೆಗೆ ಹಾಲುಮತ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಗುರುಪೀಠದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ ಹೇಳಿದರು.<br><br> ಮೂರು ದಿನಗಳ ವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ವಿದ್ವಾಂಸರು, ಸಂಶೋಧಕರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಮೊದಲ ದಿನ ಹಾಲುಮತದ ಪಂಥ ಕುರಿತು ಹೈದರಬಾದ್ನ ವಿದ್ವಾಂಸರು ಉಪನ್ಯಾಸ ನೀಡಲಿದ್ದಾರೆ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.<br><br> ಜ.13ರಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ದ್ವಾಕರನಾಥ ಹಾಗೂ 14 ರಂದು ಕನ್ನಡ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಉಪನ್ಯಾಸ ನೀಡಲಿದ್ದಾರೆ. ಸಿದ್ದ ಪರಂಪರೆ, ಬಹುಜನರ ಸಂಸ್ಕೃತಿಗಳ ಅಸ್ತಿತ್ವ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.</p>.<p>ಫೆ.15ರಂದು ಶಿವರಾತ್ರಿ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ, 1108 ಶಿವಲಿಂಗಗಳನ್ನು 1108 ದಂಪತಿಗಳಿಂದ ಪೂಜಿಸುವ ಕಾರ್ಯಕ್ರಮ ನಡೆಯಲಿದೆ. ಕಲಾತಂಡಗಳಿಂದ ಭಕ್ತಿ ಸಂಗೀತ, ನೃತ್ಯ, ನಾಟಕಗಳ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು<br><br> ಲಕ್ಷ್ಮಣ ಗಾಣಧಾಳ, ಮಹಾದೇವಪ್ಪ ಮಿರ್ಜಾಪುರ, ಹನುಮಂತಪ್ಪ ಜಾಲಿಬೆಂಚಿ, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಗುಂಡಪ್ಪ ಸಾಹುಕಾರ, ನಾಗರಾಜ ಮಡ್ಡಿಪೇಟೆ, ಯಶವಂತ, ಶೇಖರ ವಾರದ, ಹನುಮಂತಪ್ಪ, ಬಸಯ್ಯ ಸಾಹುಕಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>