<p><strong>ಜಾಲಹಳ್ಳಿ (ರಾಯಚೂರು ಜಿಲ್ಲೆ):</strong> ಇಲ್ಲಿಗೆ ಸಮೀಪ ಚಿಂಚೋಳಿ ಗ್ರಾಮದ ಬಳಿ ತಿಂಥಣಿ ಬ್ರಿಡ್ಜ್–ಕಲ್ಮಲಾ ರಾಜ್ಯಹೆದ್ದಾರಿಯಲ್ಲಿ ಕಾರು–ಲಾರಿ ಮಧ್ಯೆ ಶುಕ್ರವಾರ ಡಿಕ್ಕಿ ಉಂಟಾಗಿ ಒಬ್ಬರು ಮಹಿಳೆ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.</p>.<p>ಲಿಂಗಸುಗೂರು ತಾಲ್ಲೂಕಿನ ದೇವರಭೂಪುರ ಗ್ರಾಮದ ಪದ್ದಮ್ಮ ಹನುಮನಗೌಡ (40), ಅಂಬಣ್ಣಗೌಡ ಆದನಗೌಡ (65) ಹಾಗೂ ರಾಮಣ್ಣಾ ಗುಡದನಾಳ (90) ಮೃತಪಟ್ಟಿದ್ದಾರೆ. ಗುಂಡಪ್ಪ ಯರಡೋಣಿ, ಶಿವನಗೌಡ ಪೊಲೀಸ್ಪಾಟೀಲ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಜಾಲಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.</p>.<p>ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕಾರಿನಲ್ಲಿ ಮರಳುವಾಗ ಅಪಘಾತ ಉಂಟಾಗಿದೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ. ಗ್ರಾಮದ ಜನರೆಲ್ಲ ಸ್ಥಳಕ್ಕೆ ಧಾವಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕೆಲವು ಸಮಯದ ಬಳಿಕ ಸ್ಥಳಕ್ಕೆ ಬಂದ ಸಂಬಂಧಿಗಳ ಆಕ್ರಂದನ ಮುಗಿಲುಮುಟ್ಟಿತ್ತು. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ (ರಾಯಚೂರು ಜಿಲ್ಲೆ):</strong> ಇಲ್ಲಿಗೆ ಸಮೀಪ ಚಿಂಚೋಳಿ ಗ್ರಾಮದ ಬಳಿ ತಿಂಥಣಿ ಬ್ರಿಡ್ಜ್–ಕಲ್ಮಲಾ ರಾಜ್ಯಹೆದ್ದಾರಿಯಲ್ಲಿ ಕಾರು–ಲಾರಿ ಮಧ್ಯೆ ಶುಕ್ರವಾರ ಡಿಕ್ಕಿ ಉಂಟಾಗಿ ಒಬ್ಬರು ಮಹಿಳೆ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.</p>.<p>ಲಿಂಗಸುಗೂರು ತಾಲ್ಲೂಕಿನ ದೇವರಭೂಪುರ ಗ್ರಾಮದ ಪದ್ದಮ್ಮ ಹನುಮನಗೌಡ (40), ಅಂಬಣ್ಣಗೌಡ ಆದನಗೌಡ (65) ಹಾಗೂ ರಾಮಣ್ಣಾ ಗುಡದನಾಳ (90) ಮೃತಪಟ್ಟಿದ್ದಾರೆ. ಗುಂಡಪ್ಪ ಯರಡೋಣಿ, ಶಿವನಗೌಡ ಪೊಲೀಸ್ಪಾಟೀಲ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಜಾಲಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.</p>.<p>ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕಾರಿನಲ್ಲಿ ಮರಳುವಾಗ ಅಪಘಾತ ಉಂಟಾಗಿದೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ. ಗ್ರಾಮದ ಜನರೆಲ್ಲ ಸ್ಥಳಕ್ಕೆ ಧಾವಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕೆಲವು ಸಮಯದ ಬಳಿಕ ಸ್ಥಳಕ್ಕೆ ಬಂದ ಸಂಬಂಧಿಗಳ ಆಕ್ರಂದನ ಮುಗಿಲುಮುಟ್ಟಿತ್ತು. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>