<p><strong>ಕವಿತಾಳ: </strong>ಸಿರವಾರ ತಾಲ್ಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ, ವಿಷಪೂರಿತ ಚವಳೆಕಾಯಿಯ ಪಲ್ಯ ಸೇವಿಸಿ ಅಸ್ವಸ್ಥರಾಗಿದ್ದ ತಂದೆ ಹಾಗೂ ಇಬ್ಬರು ಪುತ್ರಿಯರು ಮಂಗಳವಾರ ಮೃತಪಟ್ಟಿದ್ದಾರೆ. ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದಾರೆ.</p><p>ರಮೇಶ ನಾಯಕ (38), ಪುತ್ರಿಯರಾದ ನಾಗಮ್ಮ (8), ದೀಪಾ (6) ಮೃತರು. ಅವರ ಪತ್ನಿ ಪದ್ಮಾ (35) ಸ್ಥಿತಿ ಗಂಭೀರವಾಗಿದ್ದು, ಪುತ್ರ ಕೃಷ್ಣ (12), ಪುತ್ರಿ ಚೈತ್ರಾ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.</p><p>ಮೂವರಿಗೂ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ರಾಯಚೂರು ರಿಮ್ಸ್ಗೆ ದಾಖಲಿಸಲಾಗಿದೆ. ರಮೇಶ ನಾಯಕ ಅವರು ಎರಡು ಎಕರೆ ಸ್ವಂತ ಜಮೀನಿನಲ್ಲಿ ಹತ್ತಿ ಬೆಳೆದಿದ್ದರು. ಅದರಲ್ಲಿಯೇ ಮನೆ ಬಳಕೆಗಾಗಿ ತರಕಾರಿ ಬೆಳೆದಿದ್ದರು.</p><p>ಕೀಟ ನಿಯಂತ್ರಣಕ್ಕಾಗಿ ಹತ್ತಿ ಗಿಡಗಳ ಕೆಳಗೆ ಕೀಟನಾಶಕ ಮಾತ್ರೆಗಳನ್ನು ಇಟ್ಟಿದ್ದರು. ಸೋಮವಾರ ಹೊಲದಿಂದ ಚವಳೆಕಾಯಿ ತಂದು ಪಲ್ಯ ತಯಾರಿಸಿ ರಾತ್ರಿ ತಿಂದಿದ್ದರು. ನಂತರ ವಾಂತಿ–ಭೇದಿ ಕಾಣಿಸಿಕೊಂಡಿದೆ. ಗ್ರಾಮಸ್ಥರು ಎಲ್ಲರನ್ನು ಚಿಕಿತ್ಸೆಗೆ ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಿದ್ದರು. ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ: </strong>ಸಿರವಾರ ತಾಲ್ಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ, ವಿಷಪೂರಿತ ಚವಳೆಕಾಯಿಯ ಪಲ್ಯ ಸೇವಿಸಿ ಅಸ್ವಸ್ಥರಾಗಿದ್ದ ತಂದೆ ಹಾಗೂ ಇಬ್ಬರು ಪುತ್ರಿಯರು ಮಂಗಳವಾರ ಮೃತಪಟ್ಟಿದ್ದಾರೆ. ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದಾರೆ.</p><p>ರಮೇಶ ನಾಯಕ (38), ಪುತ್ರಿಯರಾದ ನಾಗಮ್ಮ (8), ದೀಪಾ (6) ಮೃತರು. ಅವರ ಪತ್ನಿ ಪದ್ಮಾ (35) ಸ್ಥಿತಿ ಗಂಭೀರವಾಗಿದ್ದು, ಪುತ್ರ ಕೃಷ್ಣ (12), ಪುತ್ರಿ ಚೈತ್ರಾ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.</p><p>ಮೂವರಿಗೂ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ರಾಯಚೂರು ರಿಮ್ಸ್ಗೆ ದಾಖಲಿಸಲಾಗಿದೆ. ರಮೇಶ ನಾಯಕ ಅವರು ಎರಡು ಎಕರೆ ಸ್ವಂತ ಜಮೀನಿನಲ್ಲಿ ಹತ್ತಿ ಬೆಳೆದಿದ್ದರು. ಅದರಲ್ಲಿಯೇ ಮನೆ ಬಳಕೆಗಾಗಿ ತರಕಾರಿ ಬೆಳೆದಿದ್ದರು.</p><p>ಕೀಟ ನಿಯಂತ್ರಣಕ್ಕಾಗಿ ಹತ್ತಿ ಗಿಡಗಳ ಕೆಳಗೆ ಕೀಟನಾಶಕ ಮಾತ್ರೆಗಳನ್ನು ಇಟ್ಟಿದ್ದರು. ಸೋಮವಾರ ಹೊಲದಿಂದ ಚವಳೆಕಾಯಿ ತಂದು ಪಲ್ಯ ತಯಾರಿಸಿ ರಾತ್ರಿ ತಿಂದಿದ್ದರು. ನಂತರ ವಾಂತಿ–ಭೇದಿ ಕಾಣಿಸಿಕೊಂಡಿದೆ. ಗ್ರಾಮಸ್ಥರು ಎಲ್ಲರನ್ನು ಚಿಕಿತ್ಸೆಗೆ ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಿದ್ದರು. ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>