ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿತಾ ಮಿಶ್ರಾ ತೋಟದ ಶ್ರೀಗಂಧ ಕಳವು

Last Updated 25 ಜೂನ್ 2021, 13:43 IST
ಅಕ್ಷರ ಗಾತ್ರ

ಕವಿತಾಳ (ರಾಯಚೂರು ಜಿಲ್ಲೆ): ಅರಣ್ಯಕೃಷಿಯಲ್ಲಿ ಖ್ಯಾತಿ ಪಡೆದ ಕವಿತಾಳದ ರೈತ ಮಹಿಳೆ ಕವಿತಾ ಮಿಶ್ರಾ ಅವರ ತೋಟದಲ್ಲಿ ಕಳ್ಳರು ಮೂರು ಶ್ರೀಗಂಧ ಮರಗಳನ್ನು ಗುರುವಾರ ರಾತ್ರಿ ಕತ್ತರಿಸಿಕೊಂಡು ಹೋಗಿದ್ದು, ಈ ಸಂಬಂಧ ಕವಿತಾಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಶಂಕಾಸ್ಪದವಾಗಿ ಪಟ್ಟಣದ ಹೊರಭಾಗ ಶೆಡ್‌ ಹಾಕಿಕೊಂಡಿದ್ದ ಹೊರರಾಜ್ಯದ ವಲಸೆ ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿಸಲಾಗಿದೆ.

ತನಿಖೆ ನಡೆಯುತ್ತಿರುವುದರಿಂದ ಮಾಹಿತಿ ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT