<p><strong>ಮಾನ್ವಿ:</strong> ‘ಗ್ರಾಹಕರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಸಹಕಾರಿ ಸಂಸ್ಥೆಗಳು ಉತ್ತಮವಾಗಿ ಬೆಳವಣಿಗೆ ಹೊಂದಲು ಸಾಧ್ಯ’ ಎಂದು ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಎಂ.ಈರಣ್ಣ ಗುತ್ತೇದಾರ ಹೇಳಿದರು.</p>.<p>ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ 11ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿಯು 2020-21ನೇ ಸಾಲಿನಲ್ಲಿ ₹ 56.7ಕೋಟಿ ವಹಿವಾಟು ನಡೆಸಿ ₹ 1.04ಕೋಟಿ ನಿವ್ವಳ ಲಾಭ ಗಳಿಸಿದೆ. ಸಂಸ್ಥೆಯ ಪ್ರಗತಿಗೆ ಸಿಬ್ಬಂದಿಯ ಪರಿಶ್ರಮ, ಗ್ರಾಹಕರ ಸಹಕಾರ ಹಾಗೂ ಆಡಳಿತ ಮಂಡಳಿಯ ಪ್ರೋತ್ಸಾಹ ಕಾರಣ’ ಎಂದರು.</p>.<p>‘ಸಿರವಾರ ಪಟ್ಟಣದಲ್ಲಿ ಈಗಾಗಲೇ ಶಾಖೆಯನ್ನು ತೆರೆಯಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ದೇವದುರ್ಗ ಹಾಗೂ ಲಿಂಗಸೂಗುರು ಪಟ್ಟಣಗಳಲ್ಲಿ ಸಂಸ್ಥೆಯ ಶಾಖೆಗಳನ್ನು ಆರಂಭಿಸಲಾಗುವುದು’ ಎಂದು ಅವರು ತಿಳಿಸಿದರು.</p>.<p>ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಬಿ ವಾರ್ಷಿಕ ವರದಿ ಮಂಡಿಸಿ, ವಿವಿಧ ನಿರ್ಣಯಗಳಿಗೆ ಸರ್ವ ಸದಸ್ಯರ ಅನುಮೋದನೆ ಪಡೆದರು. ಸಹಕಾರ ಭಾರತಿಯ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಗೌಡ ನಕ್ಕುಂದಿ ಸಭೆಯನ್ನು ಉದ್ಘಾಟಿಸಿದರು.</p>.<p>ಮಟಮಾರಿಯ ಜ್ಞಾನಾನಂದ ಮಹಾರಾಜ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆಯ ಮಾನ್ವಿ ಹಾಗೂ ಸಿರವಾರ<br />ಶಾಖೆಗಳ ನಿರ್ದೇಶಕ ಮಂಡಳಿ ಸದಸ್ಯರು ಇದ್ದರು. ಕೆ.ಅಜೇಯಕುಮಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ‘ಗ್ರಾಹಕರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಸಹಕಾರಿ ಸಂಸ್ಥೆಗಳು ಉತ್ತಮವಾಗಿ ಬೆಳವಣಿಗೆ ಹೊಂದಲು ಸಾಧ್ಯ’ ಎಂದು ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಎಂ.ಈರಣ್ಣ ಗುತ್ತೇದಾರ ಹೇಳಿದರು.</p>.<p>ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ 11ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿಯು 2020-21ನೇ ಸಾಲಿನಲ್ಲಿ ₹ 56.7ಕೋಟಿ ವಹಿವಾಟು ನಡೆಸಿ ₹ 1.04ಕೋಟಿ ನಿವ್ವಳ ಲಾಭ ಗಳಿಸಿದೆ. ಸಂಸ್ಥೆಯ ಪ್ರಗತಿಗೆ ಸಿಬ್ಬಂದಿಯ ಪರಿಶ್ರಮ, ಗ್ರಾಹಕರ ಸಹಕಾರ ಹಾಗೂ ಆಡಳಿತ ಮಂಡಳಿಯ ಪ್ರೋತ್ಸಾಹ ಕಾರಣ’ ಎಂದರು.</p>.<p>‘ಸಿರವಾರ ಪಟ್ಟಣದಲ್ಲಿ ಈಗಾಗಲೇ ಶಾಖೆಯನ್ನು ತೆರೆಯಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ದೇವದುರ್ಗ ಹಾಗೂ ಲಿಂಗಸೂಗುರು ಪಟ್ಟಣಗಳಲ್ಲಿ ಸಂಸ್ಥೆಯ ಶಾಖೆಗಳನ್ನು ಆರಂಭಿಸಲಾಗುವುದು’ ಎಂದು ಅವರು ತಿಳಿಸಿದರು.</p>.<p>ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಬಿ ವಾರ್ಷಿಕ ವರದಿ ಮಂಡಿಸಿ, ವಿವಿಧ ನಿರ್ಣಯಗಳಿಗೆ ಸರ್ವ ಸದಸ್ಯರ ಅನುಮೋದನೆ ಪಡೆದರು. ಸಹಕಾರ ಭಾರತಿಯ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಗೌಡ ನಕ್ಕುಂದಿ ಸಭೆಯನ್ನು ಉದ್ಘಾಟಿಸಿದರು.</p>.<p>ಮಟಮಾರಿಯ ಜ್ಞಾನಾನಂದ ಮಹಾರಾಜ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆಯ ಮಾನ್ವಿ ಹಾಗೂ ಸಿರವಾರ<br />ಶಾಖೆಗಳ ನಿರ್ದೇಶಕ ಮಂಡಳಿ ಸದಸ್ಯರು ಇದ್ದರು. ಕೆ.ಅಜೇಯಕುಮಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>