ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಾಲದಲ್ಲಿ ಸಾಲ ಮರುಪಾವತಿ ಅಗತ್ಯ: ಎಂ.ಈರಣ್ಣ ಗುತ್ತೇದಾರ

ಲಕ್ಷ್ಮೀ ಪತ್ತಿನ ಸೌಹರ್ದ ಸಹಕಾರಿಯ 11ನೇ ವಾರ್ಷಿಕ ಮಹಾಸಭೆ
Last Updated 1 ನವೆಂಬರ್ 2021, 7:34 IST
ಅಕ್ಷರ ಗಾತ್ರ

ಮಾನ್ವಿ: ‘ಗ್ರಾಹಕರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಸಹಕಾರಿ ಸಂಸ್ಥೆಗಳು ಉತ್ತಮವಾಗಿ ಬೆಳವಣಿಗೆ ಹೊಂದಲು ಸಾಧ್ಯ’ ಎಂದು ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಎಂ.ಈರಣ್ಣ ಗುತ್ತೇದಾರ ಹೇಳಿದರು.

ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ 11ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿಯು 2020-21ನೇ ಸಾಲಿನಲ್ಲಿ ₹ 56.7ಕೋಟಿ ವಹಿವಾಟು ನಡೆಸಿ ₹ 1.04ಕೋಟಿ ನಿವ್ವಳ ಲಾಭ ಗಳಿಸಿದೆ. ಸಂಸ್ಥೆಯ ಪ್ರಗತಿಗೆ ಸಿಬ್ಬಂದಿಯ ಪರಿಶ್ರಮ, ಗ್ರಾಹಕರ ಸಹಕಾರ ಹಾಗೂ ಆಡಳಿತ ಮಂಡಳಿಯ ಪ್ರೋತ್ಸಾಹ ಕಾರಣ’ ಎಂದರು.

‘ಸಿರವಾರ ಪಟ್ಟಣದಲ್ಲಿ ಈಗಾಗಲೇ ಶಾಖೆಯನ್ನು ತೆರೆಯಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ದೇವದುರ್ಗ ಹಾಗೂ ಲಿಂಗಸೂಗುರು ಪಟ್ಟಣಗಳಲ್ಲಿ ಸಂಸ್ಥೆಯ ಶಾಖೆಗಳನ್ನು ಆರಂಭಿಸಲಾಗುವುದು’ ಎಂದು ಅವರು ತಿಳಿಸಿದರು.

ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಬಿ ವಾರ್ಷಿಕ ವರದಿ ಮಂಡಿಸಿ, ವಿವಿಧ ನಿರ್ಣಯಗಳಿಗೆ ಸರ್ವ ಸದಸ್ಯರ ಅನುಮೋದನೆ ಪಡೆದರು. ಸಹಕಾರ ಭಾರತಿಯ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಗೌಡ ನಕ್ಕುಂದಿ ಸಭೆಯನ್ನು ಉದ್ಘಾಟಿಸಿದರು.

ಮಟಮಾರಿಯ ಜ್ಞಾನಾನಂದ ಮಹಾರಾಜ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆಯ ಮಾನ್ವಿ ಹಾಗೂ ಸಿರವಾರ
ಶಾಖೆಗಳ ನಿರ್ದೇಶಕ ಮಂಡಳಿ ಸದಸ್ಯರು ಇದ್ದರು. ಕೆ.ಅಜೇಯಕುಮಾರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT