<p><strong>ಸಿಂಧನೂರು</strong>: ತಾಲ್ಲೂಕಿನ ವಳಬಳ್ಳಾರಿ ಗ್ರಾಮದಲ್ಲಿರುವ ತಿಮ್ಮಾಪುರ ಏತ ನೀರಾವರಿ ಯೋಜನೆಯನ್ನು ಕೆಲವು ರೈತರು ಗುರುವಾರ ಬಂದ್ ಮಾಡಿದ್ದರಿಂದ ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ ಅವರು ಸ್ಥಳಕ್ಕೆ ತೆರಳಿ ಅಧಿಕಾರಿಗಳು ಹಾಗೂ ರೈತರೊಂದಿಗೆ ಚರ್ಚಿಸಿದರು.</p><p>ತಿಮ್ಮಾಪುರ ಏತ ನೀರಾವರಿ ಯೋಜನೆಗೆ ಪ್ರಾರಂಭವಾಗಿ ಒಂದು ವರ್ಷವಾಗಿದೆ. ಆದರೆ ಭೂಮಿ ಕಳೆಕೊಂಡ ರೈತರಿಗೆ ಇದುವರೆಗೂ ರಾಜ್ಯ ಸರ್ಕಾರಿದಂದ ಪರಿಹಾರದ ಹಣ ಬಂದಿಲ್ಲ. ಚೆಕ್ ವಿತರಣೆ ಆಗುವವರೆಗೂ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಒಪ್ಪುವುದಿಲ್ಲ ಎಂದು ರೈತರು ಪಟ್ಟು ಹಿಡಿದರು.</p><p>ಈ ವೇಳೆ ಬಸವರಾಜ ನಾಡಗೌಡ ಅವರು ರೈತರ ಮನವೊಲಿಸಿ, ಆದಷ್ಟು ಶೀಘ್ರ ಯೋಜನೆಗೆ ಭೂಮಿ ನೀಡಿದ ರೈತರಿಗೆ ಪರಿಹಾರದ ಹಣ ಪಾವತಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.<br> ಆದರೆ ಇದಕ್ಕೆ ಒಪ್ಪದ ರೈತರು ಸುಮಾರು ₹11 ಕೋಟಿಗೂ ಅಧಿಕ ಹಣ ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಹಣ ನೀಡುವವರೆಗೂ ತಿಮ್ಮಾಪುರ ಏತ ನೀರಾವರಿ ಯೋಜನೆಯನ್ನು ಪ್ರಾರಂಭಿಸಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಸಾಧಿಕ್, ಕಿರಿಯ ಎಂಜನಿಯರ್ ರಾಮರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು</strong>: ತಾಲ್ಲೂಕಿನ ವಳಬಳ್ಳಾರಿ ಗ್ರಾಮದಲ್ಲಿರುವ ತಿಮ್ಮಾಪುರ ಏತ ನೀರಾವರಿ ಯೋಜನೆಯನ್ನು ಕೆಲವು ರೈತರು ಗುರುವಾರ ಬಂದ್ ಮಾಡಿದ್ದರಿಂದ ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ ಅವರು ಸ್ಥಳಕ್ಕೆ ತೆರಳಿ ಅಧಿಕಾರಿಗಳು ಹಾಗೂ ರೈತರೊಂದಿಗೆ ಚರ್ಚಿಸಿದರು.</p><p>ತಿಮ್ಮಾಪುರ ಏತ ನೀರಾವರಿ ಯೋಜನೆಗೆ ಪ್ರಾರಂಭವಾಗಿ ಒಂದು ವರ್ಷವಾಗಿದೆ. ಆದರೆ ಭೂಮಿ ಕಳೆಕೊಂಡ ರೈತರಿಗೆ ಇದುವರೆಗೂ ರಾಜ್ಯ ಸರ್ಕಾರಿದಂದ ಪರಿಹಾರದ ಹಣ ಬಂದಿಲ್ಲ. ಚೆಕ್ ವಿತರಣೆ ಆಗುವವರೆಗೂ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಒಪ್ಪುವುದಿಲ್ಲ ಎಂದು ರೈತರು ಪಟ್ಟು ಹಿಡಿದರು.</p><p>ಈ ವೇಳೆ ಬಸವರಾಜ ನಾಡಗೌಡ ಅವರು ರೈತರ ಮನವೊಲಿಸಿ, ಆದಷ್ಟು ಶೀಘ್ರ ಯೋಜನೆಗೆ ಭೂಮಿ ನೀಡಿದ ರೈತರಿಗೆ ಪರಿಹಾರದ ಹಣ ಪಾವತಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.<br> ಆದರೆ ಇದಕ್ಕೆ ಒಪ್ಪದ ರೈತರು ಸುಮಾರು ₹11 ಕೋಟಿಗೂ ಅಧಿಕ ಹಣ ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಹಣ ನೀಡುವವರೆಗೂ ತಿಮ್ಮಾಪುರ ಏತ ನೀರಾವರಿ ಯೋಜನೆಯನ್ನು ಪ್ರಾರಂಭಿಸಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಸಾಧಿಕ್, ಕಿರಿಯ ಎಂಜನಿಯರ್ ರಾಮರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>