ರಾಯಚೂರು: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಟಿಪ್ಪರ್ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಹೈದರಾಬಾದ್ನ ಶಾದ್ನಗರ ನಿವಾಸಿ ರಮೇಶ (43) ಮೃತ ವ್ಯಕ್ತಿ. ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ ರಮೇಶ, ರಸ್ತೆ ವಿಭಜಕ ದಾಟುವಾಗ ಟಿಪ್ಪರ್ ಚಕ್ರದ ಅಡಿಗೆ ಸಿಲುಕಿದ್ದಾರೆ. ತಲೆ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.