ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಭೇಟಿ

Last Updated 7 ಜುಲೈ 2021, 9:39 IST
ಅಕ್ಷರ ಗಾತ್ರ

ಮಾನ್ವಿ: ಪಟ್ಟಣದ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿಗಳಿಗೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಮಂಗಳವಾರ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದರು.

ವಿದ್ಯಾರ್ಥಿ ವೇತನ ಪಾವತಿಯಲ್ಲಿನ ವಿಳಂಬ ಸರಿಪಡಿಸುವುದು ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದಲ್ಲಿನ ಲೋಪದೋಷಗಳು ಹಾಗೂ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಅವರು ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.

ನಂತರ ಬಿಸಿಎಂ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜೆಸ್ಕಾಂ ಕಚೇರಿ ಸೇರಿ ಇತರ
ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.

ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಾದ ಸತೀಶ, ಚಿದಾನಂದಪ್ಪ, ಸ್ಥಳೀಯ ಅಧಿಕಾರಿಗಳಾದ ರವೀಂದ್ರ, ಚಂದ್ರಶೇಖರ ನಂದಿಹಾಳ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT