ರಾಯಚೂರು: ಆಕಾಶವಾಣಿ ರಾಯಚೂರು ಕೇಂದ್ರವು ಮೇ 21 ರಂದು ಸಂಜೆ 6 ಗಂಟೆ 50 ನಿಮಿಷದಿಂದ 7 ಗಂಟೆ 35 ನಿಮಿಷದವರೆಗೆ ‘ಬರಗಾಲದ ಪರಿಸ್ಥಿತಿಯಲ್ಲಿ ಮೇವಿನ ಕೊರತೆ ನೀಗಿಸಲು ಪರ್ಯಾಯ ಮಾರ್ಗಗಳು’ ಕುರಿತು ನೇರ ಫೋನ್-ಇನ್ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ರಾಯಚೂರು ಕೃಷಿ ಸಂಶೋಧನಾ ಕೇಂದ್ರದ ಪ್ರಾಣಿ ತಜ್ಞ ಡಾ.ಶ್ರೀಧರ್ ಜೆ.ಎನ್ ಅವರು ಭಾಗವಹಿಸಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.