ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಗೀತ ದೀಪೋತ್ಸವ’ ಸಂಭ್ರಮ ನಾಳೆ

Last Updated 4 ನವೆಂಬರ್ 2021, 10:46 IST
ಅಕ್ಷರ ಗಾತ್ರ

ಸಿಂಧನೂರು: ಶ್ರೀಗುರು ಪಂಚಾಕ್ಷರಿ ಪುಟ್ಟರಾಜ ಗವಾಯಿಗಳ ಸಂಗೀತ ಸೇವಾ ಸಮಿತಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ.5 ರಂದು ಬೆಳಿಗ್ಗೆ 9.30 ಗಂಟೆಗೆ ಸುಕಾಲಪೇಟೆ ರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ 27ನೇ ವರ್ಷದ ಸಂಗೀತ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಬಸವರಾಜ ಮೋತಿ ತಿಳಿಸಿದ್ದಾರೆ.

ಬುಧವಾರ ಹೇಳಿಕೆ ನೀಡಿರುವ ಅವರು, ರಂಭಾಪುರಿ ಖಾಸಾಶಾಖಾ ಮಠದ ಸೋಮನಾಥ ಶಿವಾಚಾರ್ಯ, ಬೇವಿನಾಳದ ಶರಣಯ್ಯಸ್ವಾಮಿ ಹಿರೇಮಠ ಸಾನಿಧ್ಯ ವಹಿಸುವರು.

ಮನುಜಮತ ಬಳಗದ ಅಧ್ಯಕ್ಷ ಡಿ.ಎಚ್.ಕಂಬಳಿ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಪತ್ರಕರ್ತ ಪ್ರಹ್ಲಾದಗುಡಿ ವಕೀಲ, ನಿವೃತ್ತ ಶಿಕ್ಷಕ ಧರಯ್ಯಸ್ವಾಮಿ, ಈರೇಶ ಇಲ್ಲೂರು ವಕೀಲ, ಜಾನಪದ ಅಕಾಡೆಮಿ ಸದಸ್ಯ ನಾರಾಯಣಪ್ಪ ಮಾಡಶಿರವಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು.

ಇದೇ ಸಂದರ್ಭದಲ್ಲಿ ಗಾಯಕರಾದ ಸ್ವಾತಿ ಶರ್ಮಾ, ಪುಟ್ಟರಾಜ, ಮಲ್ಲಮ್ಮ ಮೋತಿ, ಬಸವರಾಜ ಪತ್ತಾರ, ಅನುಷಾ ಕೋಟೆ, ಮಾರುತಿ ಅವರಿಂದ ಸಂಗೀತಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT