ರಾಯಚೂರು: ತಾಲ್ಲೂಕಿನ ಬಿಚ್ಚಾಲಿ ಗ್ರಾಮದಲ್ಲಿ ಶ್ರೀ ಅಪ್ಪಣ್ಣಾ ಚಾರ್ಯ ಸೇವಾ ಟ್ರಸ್ಟ್ನಿಂದ ಈಗಾಗಲೇ ಅಭಿವೃದ್ಧಿಪಡಿಸಿದ ಸರ್ವೆ ಸಂಖ್ಯೆ 35 ಮತ್ತು 37 ಸರ್ಕಾರಿ ಜಾಗ 2.23 ಎಕರೆ ಮಂತ್ರಾಲಯ ಮಠಕ್ಕೆ ಹಂಚಿಕೆ ಮಾಡಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿರುವುದಕ್ಕೆ ಟ್ರಸ್ಟ್ ಆಕ್ಷೇಪ ಎತ್ತಿದ್ದು, ಈ ಬಗ್ಗೆ ಸರ್ಕಾರದ ವಿರುದ್ಧ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದೆ.