<p>ರಾಯಚೂರು: ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರೀ ರಾಘವೇಂದ್ರ ಗುರುವೈಭವೋತ್ಸವಕ್ಕೆ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಬೊಕ್ಕಸಂ ಅಧೀಕ್ಷಕ ಗುರುರಾಜಾಚಾರ್ ಅವರು ತಿರುಮಲ ತಿರುಪತಿ ದೇವಸ್ಥಾನಗಳಿಂದ ಪವಿತ್ರ ಶ್ರೀವಾರಿ ವಸ್ತ್ರದೊಂದಿಗೆ ಆಗಮಿಸಿದರು.</p>.<p>ಟಿಟಿಡಿ ಅಧಿಕಾರಿಗಳು ಮತ್ತು ಪಂಡಿತರನ್ನು ಮಾಧ್ವ ಕಾರಿಡಾರ್ ಮೂಲಕ ಶ್ರೀ ಮಠಕ್ಕೆ ತೆರಳುವ ಮೊದಲು ಮಹಾದ್ವಾರದಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಯಿತು.</p>.<p>ಗುರುರಾಜಾಚಾರ್ ಅವರು ಪವಿತ್ರ ವಸ್ತ್ರವನ್ನು ಶ್ರೀ ರಾಯರ ಮೂಲ ಬೃಂದಾವನಕ್ಕೆ ಭಕ್ತಿಪೂರ್ವಕವಾಗಿ ಅರ್ಪಿಸಿದರು.</p>.<p>ಕಾಣಿಕೆ ನೀಡಿದ ನಂತರ, ಟಿಟಿಡಿ ಅಧಿಕಾರಿಗಳು ಶ್ರೀವಾರಿ ಶೇಷವಸ್ತ್ರ ಮತ್ತು ಪ್ರಸಾದವನ್ನು ಸ್ವಾಮೀಜಿ ಅವರಿಗೆ ಅರ್ಪಿಸಿದರು. ಪರಸ್ಪರ ಗೌರವದ ಸಂಕೇತವಾಗಿ ಗುರುರಾಜಾಚಾರ್ ಮತ್ತು ಅವರ ಜೊತೆಗಿದ್ದ ಅಧಿಕಾರಿಗಳನ್ನು ಆಶೀರ್ವದಿಸಿ, ಶೇಷವಸ್ತ್ರ, ಸ್ಮರಣಿಕೆ ಮತ್ತು ಫಲಮಂತ್ರಾಕ್ಷತೆ ನೀಡಿ ಗೌರವಿಸಿದರು.</p>.<p>ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಶ್ರೀಶಾನಂದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಶ್ರೀ ರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರೀ ರಾಘವೇಂದ್ರ ಗುರುವೈಭವೋತ್ಸವಕ್ಕೆ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಬೊಕ್ಕಸಂ ಅಧೀಕ್ಷಕ ಗುರುರಾಜಾಚಾರ್ ಅವರು ತಿರುಮಲ ತಿರುಪತಿ ದೇವಸ್ಥಾನಗಳಿಂದ ಪವಿತ್ರ ಶ್ರೀವಾರಿ ವಸ್ತ್ರದೊಂದಿಗೆ ಆಗಮಿಸಿದರು.</p>.<p>ಟಿಟಿಡಿ ಅಧಿಕಾರಿಗಳು ಮತ್ತು ಪಂಡಿತರನ್ನು ಮಾಧ್ವ ಕಾರಿಡಾರ್ ಮೂಲಕ ಶ್ರೀ ಮಠಕ್ಕೆ ತೆರಳುವ ಮೊದಲು ಮಹಾದ್ವಾರದಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಯಿತು.</p>.<p>ಗುರುರಾಜಾಚಾರ್ ಅವರು ಪವಿತ್ರ ವಸ್ತ್ರವನ್ನು ಶ್ರೀ ರಾಯರ ಮೂಲ ಬೃಂದಾವನಕ್ಕೆ ಭಕ್ತಿಪೂರ್ವಕವಾಗಿ ಅರ್ಪಿಸಿದರು.</p>.<p>ಕಾಣಿಕೆ ನೀಡಿದ ನಂತರ, ಟಿಟಿಡಿ ಅಧಿಕಾರಿಗಳು ಶ್ರೀವಾರಿ ಶೇಷವಸ್ತ್ರ ಮತ್ತು ಪ್ರಸಾದವನ್ನು ಸ್ವಾಮೀಜಿ ಅವರಿಗೆ ಅರ್ಪಿಸಿದರು. ಪರಸ್ಪರ ಗೌರವದ ಸಂಕೇತವಾಗಿ ಗುರುರಾಜಾಚಾರ್ ಮತ್ತು ಅವರ ಜೊತೆಗಿದ್ದ ಅಧಿಕಾರಿಗಳನ್ನು ಆಶೀರ್ವದಿಸಿ, ಶೇಷವಸ್ತ್ರ, ಸ್ಮರಣಿಕೆ ಮತ್ತು ಫಲಮಂತ್ರಾಕ್ಷತೆ ನೀಡಿ ಗೌರವಿಸಿದರು.</p>.<p>ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಶ್ರೀಶಾನಂದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>