<p><strong>ಸಿಂಧನೂರು (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ಮುಕ್ಕುಂದಾದ ಗ್ರಾಮಸ್ಥರಿಗೆ, ನದಿಗೆ ಹರಿಯುವ ಅವಧಿಯಲ್ಲಿ ಯಾರಾದರೂ ಮೃತಪಟ್ಟರೆ ಶವ ಹೂಳುವುದೇ ಸವಾಲಾಗಿದೆ.</p>.<p>ಭಾನುವಾರ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಅಂತ್ಯಕ್ರಿಯೆಗಾಗಿ ಹರಿಗೋಲಿನಲ್ಲಿ ಶವ ಸಾಗಿಸಿದ್ದು, ಜನರು ನದಿಯಲ್ಲಿ ಈಜಿ ಹೋಗುವ ಪರಿಸ್ಥಿತಿ ಎದುರಾಗಿತ್ತು. ಈ ಕುರಿತು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. </p>.<p>ನದಿ ದಂಡೆ ಮೇಲೆ ಸ್ಮಶಾನವಿದೆ. ಮಳೆಗಾಲದಲ್ಲಿ ಕಾಡುವ ಸಮಸ್ಯೆ ಹಿನ್ನಲೆಯಲ್ಲಿ ಪರ್ಯಾಯ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಮಯದಲ್ಲಿ ನಡುಗಡ್ಡೆಯಲ್ಲಿರುವ ಸ್ಮಶಾನಕ್ಕೆ ಹೋಗಲು ಹರಿಗೋಲು ಅಗತ್ಯ. ಶವವನ್ನು ಸಾಗಿಸಿ, ಈಜಿ ನಡುಗಡ್ಡೆ ತಲುಪಿ ಶವಸಂಸ್ಕಾರ ಮಾಡುತ್ತಾ ಬಂದಿದ್ದಾರೆ.</p>.<p>ಸಮಸ್ಯೆ ನಿವಾರಣೆಗೆ ಆಗ್ರಹ: ಸಮಸ್ಯೆ ನಿವಾರಣೆಗೆ ತಹಶೀಲ್ದಾರ್ ಮತ್ತು ಶಾಸಕ ಹಂಪನಗೌಡ ಬಾದರ್ಲಿ ಅವರು ಕ್ರಮ ಕೈಗೊಳ್ಳಬೇಕು. ಪರ್ಯಾಯ ವ್ಯವಸ್ಥೆ ಕಲ್ಪಿಸಲಿ ಎಂದು ಗ್ರಾಮದ ನಾಗರಾಜ ದೇವರಮನಿ, ರುದ್ರಮುನಿತಾತ ಒತ್ತಾಯಿಸಿದರು.</p>.<p>‘ಗ್ರಾಮದ ಸರ್ವೆ ನಂಬರ್ 238/2ರಲ್ಲಿ 1.3 ಎಕರೆ ಜಮೀನು ಸ್ಮಶಾನಕ್ಕಾಗಿ ಕಾಯ್ದಿರಿಸಿದೆ. ಮತ್ತೊಂದೆಡೆ ಎರಡು ಎಕರೆ ಭೂಮಿ ಗುರುತಿಸಲಾಗಿದೆ. ಆದರೆ ಸಲಾಗಿದೆ. ಆದರೆ, ವಾಸ್ತು ಸರಿಯಾಗಿಲ್ಲ ಎನ್ನುವ ಕಾರಣಕ್ಕೆ ಗ್ರಾಮಸ್ಥರು ಆ ಸ್ಮಶಾನ ಬಳಸಲು ಒಪ್ಪುತ್ತಿಲ್ಲ’ ಎಂದು ತಹಶೀಲ್ದಾರ್ ಅರುಣ ಎಚ್.ದೇಸಾಯಿ ಪ್ರತಿಕ್ರಿಯಿಸಿದ್ದಾರೆ. </p>.<div><blockquote>ದಶಕಗಳಿಂದ ಶವ ಸಂಸ್ಕಾರಕ್ಕಾಗಿ ತೊಂದರೆ ಅನುಭವಿಸುತ್ತಿದ್ದೇವೆ. ಸರ್ಕಾರ ನಮ್ಮ ಗೋಳನ್ನು ಕೇಳುತ್ತಿಲ್ಲ. ಊರಿನ ಜನರ ಸಮಸ್ಯೆಯನ್ನು ಕೂಡಲೇ ಬಗೆಹರಿಸಲಿ</blockquote><span class="attribution">ಚಂದ್ರಶೇಖರ ರೆಡ್ಡಿ ಮುಕ್ಕುಂದಾ ಗ್ರಾಮದ ನಿವಾಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ಮುಕ್ಕುಂದಾದ ಗ್ರಾಮಸ್ಥರಿಗೆ, ನದಿಗೆ ಹರಿಯುವ ಅವಧಿಯಲ್ಲಿ ಯಾರಾದರೂ ಮೃತಪಟ್ಟರೆ ಶವ ಹೂಳುವುದೇ ಸವಾಲಾಗಿದೆ.</p>.<p>ಭಾನುವಾರ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಅಂತ್ಯಕ್ರಿಯೆಗಾಗಿ ಹರಿಗೋಲಿನಲ್ಲಿ ಶವ ಸಾಗಿಸಿದ್ದು, ಜನರು ನದಿಯಲ್ಲಿ ಈಜಿ ಹೋಗುವ ಪರಿಸ್ಥಿತಿ ಎದುರಾಗಿತ್ತು. ಈ ಕುರಿತು ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. </p>.<p>ನದಿ ದಂಡೆ ಮೇಲೆ ಸ್ಮಶಾನವಿದೆ. ಮಳೆಗಾಲದಲ್ಲಿ ಕಾಡುವ ಸಮಸ್ಯೆ ಹಿನ್ನಲೆಯಲ್ಲಿ ಪರ್ಯಾಯ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಮಯದಲ್ಲಿ ನಡುಗಡ್ಡೆಯಲ್ಲಿರುವ ಸ್ಮಶಾನಕ್ಕೆ ಹೋಗಲು ಹರಿಗೋಲು ಅಗತ್ಯ. ಶವವನ್ನು ಸಾಗಿಸಿ, ಈಜಿ ನಡುಗಡ್ಡೆ ತಲುಪಿ ಶವಸಂಸ್ಕಾರ ಮಾಡುತ್ತಾ ಬಂದಿದ್ದಾರೆ.</p>.<p>ಸಮಸ್ಯೆ ನಿವಾರಣೆಗೆ ಆಗ್ರಹ: ಸಮಸ್ಯೆ ನಿವಾರಣೆಗೆ ತಹಶೀಲ್ದಾರ್ ಮತ್ತು ಶಾಸಕ ಹಂಪನಗೌಡ ಬಾದರ್ಲಿ ಅವರು ಕ್ರಮ ಕೈಗೊಳ್ಳಬೇಕು. ಪರ್ಯಾಯ ವ್ಯವಸ್ಥೆ ಕಲ್ಪಿಸಲಿ ಎಂದು ಗ್ರಾಮದ ನಾಗರಾಜ ದೇವರಮನಿ, ರುದ್ರಮುನಿತಾತ ಒತ್ತಾಯಿಸಿದರು.</p>.<p>‘ಗ್ರಾಮದ ಸರ್ವೆ ನಂಬರ್ 238/2ರಲ್ಲಿ 1.3 ಎಕರೆ ಜಮೀನು ಸ್ಮಶಾನಕ್ಕಾಗಿ ಕಾಯ್ದಿರಿಸಿದೆ. ಮತ್ತೊಂದೆಡೆ ಎರಡು ಎಕರೆ ಭೂಮಿ ಗುರುತಿಸಲಾಗಿದೆ. ಆದರೆ ಸಲಾಗಿದೆ. ಆದರೆ, ವಾಸ್ತು ಸರಿಯಾಗಿಲ್ಲ ಎನ್ನುವ ಕಾರಣಕ್ಕೆ ಗ್ರಾಮಸ್ಥರು ಆ ಸ್ಮಶಾನ ಬಳಸಲು ಒಪ್ಪುತ್ತಿಲ್ಲ’ ಎಂದು ತಹಶೀಲ್ದಾರ್ ಅರುಣ ಎಚ್.ದೇಸಾಯಿ ಪ್ರತಿಕ್ರಿಯಿಸಿದ್ದಾರೆ. </p>.<div><blockquote>ದಶಕಗಳಿಂದ ಶವ ಸಂಸ್ಕಾರಕ್ಕಾಗಿ ತೊಂದರೆ ಅನುಭವಿಸುತ್ತಿದ್ದೇವೆ. ಸರ್ಕಾರ ನಮ್ಮ ಗೋಳನ್ನು ಕೇಳುತ್ತಿಲ್ಲ. ಊರಿನ ಜನರ ಸಮಸ್ಯೆಯನ್ನು ಕೂಡಲೇ ಬಗೆಹರಿಸಲಿ</blockquote><span class="attribution">ಚಂದ್ರಶೇಖರ ರೆಡ್ಡಿ ಮುಕ್ಕುಂದಾ ಗ್ರಾಮದ ನಿವಾಸಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>