ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಾವಾಗಲೂ ಪುಣ್ಯಪ್ರದ ಕಾಲ ಪುಷ್ಕರ ಕಾಲ. ಪರಮಪವಿತ್ರ ಕಾಲವಿದು, ನದಿಯಲ್ಲಿ ಸ್ನಾನಮಾಡಿ ತರ್ಪಣ ಬಿಡುವುದು, ಪಿಂಡಪ್ರಧಾನ, ಅನ್ನದಾನ ಸೇರಿದಂತೆ ವಿವಿಧ ಪೂಜೆ, ಪುನಸ್ಕಾರಗಳು ಜರುಗುತ್ತವೆ. ಇದಕ್ಕಾಗಿ ದೇಶದ ವಿವಿಧೆಡೆಯಿಂದ ಭಕ್ತರು ಮಂತ್ರಾಲಯಕ್ಕೆ ಬರುತ್ತಾರೆ’ ಎಂದು ತಿಳಿಸಿದರು.