<p><strong>ರಾಯಚೂರು: </strong>ಮಂತ್ರಾಲಯದ ಬಳಿ ತುಂಗಭದ್ರಾ ಪುಷ್ಕರ ಪುಣ್ಯ ಸ್ನಾನ ಮಾಡುವುದನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪೊಲೀಸರು ಶನಿವಾರದಿಂದ ತಡೆ ಒಡ್ಡಿದ್ದಾರೆ.</p>.<p>ಕೋವಿಡ್ –19 ತಡೆ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲನೆ ಮಾಡುವಂತೆ ಜಿಲ್ಲಾಡಳಿತದಿಂದ ಸೂಚಿಸಲಾಗಿದೆ. ಪುಷ್ಕರ ಸ್ನಾನದ ಮಾಡುವಾಗ ನಿಯಮ ಪಾಲನೆ ಆಗುವುದಿಲ್ಲ ಎನ್ನುವುದನ್ನು ಅರಿತು, ನದಿತಟದತ್ತ ಜನರು ಹೋಗುವುದನ್ನು ಪೊಲೀಸರು ಸಂಪೂರ್ಣ ಸ್ಥಗಿತ ಮಾಡಿದ್ದಾರೆ.</p>.<p>ಪುಷ್ಕರ ಸ್ನಾನ ಆರಂಭದ ದಿನದಂದು ಶುಕ್ರವಾರ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ನದಿಯಲ್ಲಿ ಮಿಂದು, ಕಳಸ ಪೂಜೆ ನೆರವೇರಿಸಿ ಸ್ನಾನಕ್ಕೆ ಚಾಲನೆ ನೀಡಿದ್ದರು. ಮೊದಲ ದಿನವೇ ಜನರು ಕೋವಿಡ್ ನಿಯಮ ಪಾಲನೆ ಮಾಡದೆ ನದಿಗೆ ಇಳಿದಿದ್ದರು.</p>.<p>ವಾರಾಂತ್ಯ ಶನಿವಾರ ಮತ್ತು ಭಾನುವಾರ ಭಾರಿ ಸಂಖ್ಯೆಯಲ್ಲಿ ಜನರು ಮಂತ್ರಾಲಯ ಬರುವ ನಿರೀಕ್ಷೆ ಇದೆ.</p>.<p>ಇದೀಗ ಪುಷ್ಕರಸ್ನಾನಕ್ಕೆ ಅವಕಾಶ ಇಲ್ಲದಿರುವುದಕ್ಕೆ ಭಕ್ತರು ನಿರಾಸೆ ಅನುಭವಿಸುವಂತಾಗಿದೆ. ಶ್ರಾದ್ಧಪೂಜೆ, ಪಿಂಡಪ್ರದಾನ, ತರ್ಪಣ ಬಿಡುವುದು ಸೇರಿದಂತೆ ವಿವಿಧ ಧಾರ್ಮಿಕ ಕ್ರಿಯೆಗಳನ್ನು ನೆರವೇರಿಸಲು ಪುಷ್ಕರದ ದಿನಗಳು ವಿಶೇಷವಾಗಿರುತ್ತವೆ ಎನ್ನುವುದು ನಂಬಿಕೆ.<br />ಎಂದಿನಂತೆ ಸರದಿಯಲ್ಲಿ ಅಂತರ ಪಾಲನೆಯೊಂದಿಗೆ ರಾಯರ ದರ್ಶನ ಮಾಡುವುದಕ್ಕೆ ಜನರಿಗೆ ಅವಕಾಶವಿದೆ.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಮಂತ್ರಾಲಯದ ಬಳಿ ತುಂಗಭದ್ರಾ ಪುಷ್ಕರ ಪುಣ್ಯ ಸ್ನಾನ ಮಾಡುವುದನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪೊಲೀಸರು ಶನಿವಾರದಿಂದ ತಡೆ ಒಡ್ಡಿದ್ದಾರೆ.</p>.<p>ಕೋವಿಡ್ –19 ತಡೆ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲನೆ ಮಾಡುವಂತೆ ಜಿಲ್ಲಾಡಳಿತದಿಂದ ಸೂಚಿಸಲಾಗಿದೆ. ಪುಷ್ಕರ ಸ್ನಾನದ ಮಾಡುವಾಗ ನಿಯಮ ಪಾಲನೆ ಆಗುವುದಿಲ್ಲ ಎನ್ನುವುದನ್ನು ಅರಿತು, ನದಿತಟದತ್ತ ಜನರು ಹೋಗುವುದನ್ನು ಪೊಲೀಸರು ಸಂಪೂರ್ಣ ಸ್ಥಗಿತ ಮಾಡಿದ್ದಾರೆ.</p>.<p>ಪುಷ್ಕರ ಸ್ನಾನ ಆರಂಭದ ದಿನದಂದು ಶುಕ್ರವಾರ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ನದಿಯಲ್ಲಿ ಮಿಂದು, ಕಳಸ ಪೂಜೆ ನೆರವೇರಿಸಿ ಸ್ನಾನಕ್ಕೆ ಚಾಲನೆ ನೀಡಿದ್ದರು. ಮೊದಲ ದಿನವೇ ಜನರು ಕೋವಿಡ್ ನಿಯಮ ಪಾಲನೆ ಮಾಡದೆ ನದಿಗೆ ಇಳಿದಿದ್ದರು.</p>.<p>ವಾರಾಂತ್ಯ ಶನಿವಾರ ಮತ್ತು ಭಾನುವಾರ ಭಾರಿ ಸಂಖ್ಯೆಯಲ್ಲಿ ಜನರು ಮಂತ್ರಾಲಯ ಬರುವ ನಿರೀಕ್ಷೆ ಇದೆ.</p>.<p>ಇದೀಗ ಪುಷ್ಕರಸ್ನಾನಕ್ಕೆ ಅವಕಾಶ ಇಲ್ಲದಿರುವುದಕ್ಕೆ ಭಕ್ತರು ನಿರಾಸೆ ಅನುಭವಿಸುವಂತಾಗಿದೆ. ಶ್ರಾದ್ಧಪೂಜೆ, ಪಿಂಡಪ್ರದಾನ, ತರ್ಪಣ ಬಿಡುವುದು ಸೇರಿದಂತೆ ವಿವಿಧ ಧಾರ್ಮಿಕ ಕ್ರಿಯೆಗಳನ್ನು ನೆರವೇರಿಸಲು ಪುಷ್ಕರದ ದಿನಗಳು ವಿಶೇಷವಾಗಿರುತ್ತವೆ ಎನ್ನುವುದು ನಂಬಿಕೆ.<br />ಎಂದಿನಂತೆ ಸರದಿಯಲ್ಲಿ ಅಂತರ ಪಾಲನೆಯೊಂದಿಗೆ ರಾಯರ ದರ್ಶನ ಮಾಡುವುದಕ್ಕೆ ಜನರಿಗೆ ಅವಕಾಶವಿದೆ.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>