<p><strong>ಮಸ್ಕಿ:</strong> ತುಂಗಭದ್ರಾ ಜಲಾಶಯದ 19ನೇ ಗೇಟ್ ಕಿತ್ತು ಹೋದ ಹಿನ್ನೆಲೆಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಸೇರಿದಂತೆ ಜಿಲ್ಲೆಯ ಬಿಜೆಪಿಯ ಮಾಜಿ ಶಾಸಕರ ನಿಯೋಗ ಶುಕ್ರವಾರ ಜಲಾಶಯಕ್ಕೆ ಭೇಟಿ ನೀಡಿ ಗೇಟ್ ಅಳವಡಿಸುವ ಕಾರ್ಯ ವೀಕ್ಷಿಸಿತು.</p>.<p>ಈಗಾಗಲೇ ಗೇಟ್ ಅಳವಡಿಸುವ ಕಾರ್ಯಾಚರಣೆ ಚುರುಕಾಗಿ ನಡೆದಿದೆ. ಜಲಾಶಯದ ಸಲಹೆಗಾರ ಕನ್ನಯ್ಯ ನಾಯ್ಡು ಅವರೊಂದಿಗೆ ಚರ್ಚಿಸಲಾಗಿದೆ. ನಾಳೆ ಬೆಳಿಗ್ಗೆ ವೇಳೆಗೆ ಬಹುತೇಕ ಕಾರ್ಯಾಚರಣೆ ಮುಗಿಯಲಿದೆ ಎಂದು ತಿಳಿಸಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ನಿಯೋಗದಲ್ಲಿ ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ನೀರಾವರಿ ತಜ್ಞ ಹನುಮನಗೌಡ ಬೇಳಗುರ್ಕಿ ಸೇರಿ ಜಿಲ್ಲೆಯ ಮುಖಂಡರು ಇದ್ದರು.</p>.<p>ಇದೇ ಸಂದರ್ಭದಲ್ಲಿ ಸಚಿವ ಶಿವರಾಜ ತಂಗಡಗಿ ಅವರನ್ನು ಭೇಟಿ ಮಾಡಿ ಗೇಟ್ ಅಳವಡಿಸುವ ಕಾರ್ಯಾಚರಣೆ ಬೇಗ ಮುಗಿಸಿ ನೀರು ತಡೆ ಹಿಡಿಯುವಂತೆ ಮನವಿ ಮಾಡಲಾಯಿತು ಎಂದು ಪ್ರತಾಪಗೌಡ ಪಾಟೀಲ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ತುಂಗಭದ್ರಾ ಜಲಾಶಯದ 19ನೇ ಗೇಟ್ ಕಿತ್ತು ಹೋದ ಹಿನ್ನೆಲೆಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಸೇರಿದಂತೆ ಜಿಲ್ಲೆಯ ಬಿಜೆಪಿಯ ಮಾಜಿ ಶಾಸಕರ ನಿಯೋಗ ಶುಕ್ರವಾರ ಜಲಾಶಯಕ್ಕೆ ಭೇಟಿ ನೀಡಿ ಗೇಟ್ ಅಳವಡಿಸುವ ಕಾರ್ಯ ವೀಕ್ಷಿಸಿತು.</p>.<p>ಈಗಾಗಲೇ ಗೇಟ್ ಅಳವಡಿಸುವ ಕಾರ್ಯಾಚರಣೆ ಚುರುಕಾಗಿ ನಡೆದಿದೆ. ಜಲಾಶಯದ ಸಲಹೆಗಾರ ಕನ್ನಯ್ಯ ನಾಯ್ಡು ಅವರೊಂದಿಗೆ ಚರ್ಚಿಸಲಾಗಿದೆ. ನಾಳೆ ಬೆಳಿಗ್ಗೆ ವೇಳೆಗೆ ಬಹುತೇಕ ಕಾರ್ಯಾಚರಣೆ ಮುಗಿಯಲಿದೆ ಎಂದು ತಿಳಿಸಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ನಿಯೋಗದಲ್ಲಿ ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ನೀರಾವರಿ ತಜ್ಞ ಹನುಮನಗೌಡ ಬೇಳಗುರ್ಕಿ ಸೇರಿ ಜಿಲ್ಲೆಯ ಮುಖಂಡರು ಇದ್ದರು.</p>.<p>ಇದೇ ಸಂದರ್ಭದಲ್ಲಿ ಸಚಿವ ಶಿವರಾಜ ತಂಗಡಗಿ ಅವರನ್ನು ಭೇಟಿ ಮಾಡಿ ಗೇಟ್ ಅಳವಡಿಸುವ ಕಾರ್ಯಾಚರಣೆ ಬೇಗ ಮುಗಿಸಿ ನೀರು ತಡೆ ಹಿಡಿಯುವಂತೆ ಮನವಿ ಮಾಡಲಾಯಿತು ಎಂದು ಪ್ರತಾಪಗೌಡ ಪಾಟೀಲ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>