ಶಕ್ತಿನಗರ(ರಾಯಚೂರು ಜಿಲ್ಲೆ): ಪೆದ್ದಕುರಂ (ಕುರ್ವಕುಲ) ಸಮೀಪದ ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹಗಳು ತೆಲಂಗಾಣ ಗಡಿ ಭಾಗದ ಜುರಾಲಾ ಸಮೀಪದ ಅಣೆಕಟ್ಟು ಬಳಿ ಬುಧವಾರ ಬೆಳಿಗ್ಗೆ 7.15ಕ್ಕೆ ಪತ್ತೆಯಾಗಿವೆ. ಆದರೆ, ಅವು ಯಾರವು ಎಂಬುದು ಗೊತ್ತಾಗಿಲ್ಲ.