<p><strong>ಲಿಂಗಸುಗೂರು(ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ಜಾವೂರ ಕ್ರಾಸ್ ಬಳಿ ನಾರಾಯಣಪುರ ಬಲದಂಡೆ ಮುಖ್ಯ ನಾಲೆಗೆ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.</p><p>ಮೃತರನ್ನು ತಾಲ್ಲೂಕಿನ ಬೆಂಡೋಣಿ ಗ್ರಾಮದ ಲಕ್ಕಪ್ಪ ವಿರುಪಾಕ್ಷಪ್ಪ ಕಮರಿ (25), ಬಸವಂತ ಶರಣಪ್ಪ ಉಪ್ಪಾರ (27) ಎಂದು ಗುರುತಿಸಲಾಗಿದೆ.</p><p>ಯುವಕರು ಕಾಲುವೆಯಲ್ಲಿ ಮುಳಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕಾಲುವೆಯಿಂದ ಹೊರಗಡೆ ತರುವಷ್ಟರಲ್ಲಿ ಯುವಕರು ಕೊನೆಯುಸಿರು ಎಳೆದಿದ್ದಾರೆ.</p><p>ಘಟನಾ ಸ್ಥಳಕ್ಕೆ ತಲಪುವಷ್ಟರಲ್ಲಿ ಸ್ಥಳೀಯ ಈಜುಗಾರರು ಯುವಕರ ಮೃತದೇಹ ಹೊರಗಡೆ ತಂದಿದ್ದರು ಎಂದು ಅಗ್ನಿ ಶಾಮಕ ಠಾಣಾಧಿಕಾರಿ ಹೊನ್ನಪ್ಪ ದೊಡಮನಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು(ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ಜಾವೂರ ಕ್ರಾಸ್ ಬಳಿ ನಾರಾಯಣಪುರ ಬಲದಂಡೆ ಮುಖ್ಯ ನಾಲೆಗೆ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.</p><p>ಮೃತರನ್ನು ತಾಲ್ಲೂಕಿನ ಬೆಂಡೋಣಿ ಗ್ರಾಮದ ಲಕ್ಕಪ್ಪ ವಿರುಪಾಕ್ಷಪ್ಪ ಕಮರಿ (25), ಬಸವಂತ ಶರಣಪ್ಪ ಉಪ್ಪಾರ (27) ಎಂದು ಗುರುತಿಸಲಾಗಿದೆ.</p><p>ಯುವಕರು ಕಾಲುವೆಯಲ್ಲಿ ಮುಳಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕಾಲುವೆಯಿಂದ ಹೊರಗಡೆ ತರುವಷ್ಟರಲ್ಲಿ ಯುವಕರು ಕೊನೆಯುಸಿರು ಎಳೆದಿದ್ದಾರೆ.</p><p>ಘಟನಾ ಸ್ಥಳಕ್ಕೆ ತಲಪುವಷ್ಟರಲ್ಲಿ ಸ್ಥಳೀಯ ಈಜುಗಾರರು ಯುವಕರ ಮೃತದೇಹ ಹೊರಗಡೆ ತಂದಿದ್ದರು ಎಂದು ಅಗ್ನಿ ಶಾಮಕ ಠಾಣಾಧಿಕಾರಿ ಹೊನ್ನಪ್ಪ ದೊಡಮನಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>