<p>ಪ್ರಜಾವಾಣಿ ವಾರ್ತೆ</p>.<p>ದೇವಸೂಗೂರು (ಶಕ್ತಿನಗರ): ಗ್ರಾಮದ ಸೂಗೂರೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಶನಿವಾರ ಧಾರ್ಮಿಕ ದಿನಾಚರಣೆ ಹಿನ್ನಲೆ ಗೋಪೂಜೆ, ನಂತರ ಉಳುಮೆ ಮಾಡುವ ನೇಗಿಲು ನೇಗಿಲುಗಳನ್ನು ಹಿಡಿದು ಪೂಜೆ ಮಾಡುವ ಮೂಲಕ ಜಿಲ್ಲಾ ಉಪ ವಿಭಾಗಾಧಿಕಾರಿ ರಜನಿಕಾಂತ್ ಚೌವ್ಹಾಣ್ ಅವರು ಯುಗಾದಿ ಹಬ್ಬ ಆಚರಣೆ ಮಾಡಿದರು</p>.<p>ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಆರೋಲಿ ಸೂಗಯ್ಯಸ್ವಾಮಿ ಸಾನಿಧ್ಯ ವಹಿಸಿದ್ದರು. ದೇವಸ್ಥಾನದಲ್ಲಿ<br />ಅಭಿಷೇಕ, ಅಲಂಕಾರ ಪೂಜೆಯೊಂದಿಗೆ ಬೇವು ಬೆಲ್ಲವನ್ನು ವಿತರಿಸಲಾಯಿತು. ಅರ್ಚಕ ನಂದಿಕೋಲು ಸೂಗಯ್ಯ<br />ಸ್ವಾಮಿ ಅವರು ಪಂಚಾಂಗ ಪಠಣ ಮಾಡಿದರು.</p>.<p>ಜಿಲ್ಲಾ ಉಪವಿಭಾಗಧಿಕಾರಿ ರಜನೀಕಾಂತ್ ಚೌವ್ಹಾಣ್ ಮಾತನಾಡಿ, ‘ಹಿರಿಯರು ಮಾಡಿರುವ ಅನೇಕ ಹಬ್ಬಹರಿದಿನಗಳು ಮತ್ತು ವೈಜ್ಞಾನಿಕ ಹಿನ್ನಲೆಯನ್ನು ಮರೆಯುತ್ತಿದ್ದೇವೆ. ಯುಗಾದಿ ಮೊದಲ ದಿನವೇ ಹೊಸ ವರ್ಷವನ್ನಾಗಿ ಆಚರಿಸಿಕೊಂಡು ಈ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡುತ್ತೀದ್ದೇವೆ‘ ಎಂದರು.</p>.<p>ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಬಸನಗೌಡ ದದ್ದಲ್ ಅವರು ಸಸಿ ನೆಟ್ಟರು. ನಂತರ ಮಾತನಾಡಿದ ಅವರು, ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.</p>.<p>ಅಪರ ಜಿಲ್ಲಾಧಿಕಾರಿ ದುರುಗೇಶ, ಸೂಗೂರೇಶ್ವರ ದೇವಸ್ಥಾನದ ಮುಖ್ಯ ಅಧಿಕಾರಿ ಅನಿಲಕುಮಾರ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು, ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ದೇವಸೂಗೂರು (ಶಕ್ತಿನಗರ): ಗ್ರಾಮದ ಸೂಗೂರೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಶನಿವಾರ ಧಾರ್ಮಿಕ ದಿನಾಚರಣೆ ಹಿನ್ನಲೆ ಗೋಪೂಜೆ, ನಂತರ ಉಳುಮೆ ಮಾಡುವ ನೇಗಿಲು ನೇಗಿಲುಗಳನ್ನು ಹಿಡಿದು ಪೂಜೆ ಮಾಡುವ ಮೂಲಕ ಜಿಲ್ಲಾ ಉಪ ವಿಭಾಗಾಧಿಕಾರಿ ರಜನಿಕಾಂತ್ ಚೌವ್ಹಾಣ್ ಅವರು ಯುಗಾದಿ ಹಬ್ಬ ಆಚರಣೆ ಮಾಡಿದರು</p>.<p>ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಆರೋಲಿ ಸೂಗಯ್ಯಸ್ವಾಮಿ ಸಾನಿಧ್ಯ ವಹಿಸಿದ್ದರು. ದೇವಸ್ಥಾನದಲ್ಲಿ<br />ಅಭಿಷೇಕ, ಅಲಂಕಾರ ಪೂಜೆಯೊಂದಿಗೆ ಬೇವು ಬೆಲ್ಲವನ್ನು ವಿತರಿಸಲಾಯಿತು. ಅರ್ಚಕ ನಂದಿಕೋಲು ಸೂಗಯ್ಯ<br />ಸ್ವಾಮಿ ಅವರು ಪಂಚಾಂಗ ಪಠಣ ಮಾಡಿದರು.</p>.<p>ಜಿಲ್ಲಾ ಉಪವಿಭಾಗಧಿಕಾರಿ ರಜನೀಕಾಂತ್ ಚೌವ್ಹಾಣ್ ಮಾತನಾಡಿ, ‘ಹಿರಿಯರು ಮಾಡಿರುವ ಅನೇಕ ಹಬ್ಬಹರಿದಿನಗಳು ಮತ್ತು ವೈಜ್ಞಾನಿಕ ಹಿನ್ನಲೆಯನ್ನು ಮರೆಯುತ್ತಿದ್ದೇವೆ. ಯುಗಾದಿ ಮೊದಲ ದಿನವೇ ಹೊಸ ವರ್ಷವನ್ನಾಗಿ ಆಚರಿಸಿಕೊಂಡು ಈ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡುತ್ತೀದ್ದೇವೆ‘ ಎಂದರು.</p>.<p>ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಬಸನಗೌಡ ದದ್ದಲ್ ಅವರು ಸಸಿ ನೆಟ್ಟರು. ನಂತರ ಮಾತನಾಡಿದ ಅವರು, ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.</p>.<p>ಅಪರ ಜಿಲ್ಲಾಧಿಕಾರಿ ದುರುಗೇಶ, ಸೂಗೂರೇಶ್ವರ ದೇವಸ್ಥಾನದ ಮುಖ್ಯ ಅಧಿಕಾರಿ ಅನಿಲಕುಮಾರ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು, ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>