ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒತ್ತುವರಿ ಮಾಡಿಕೊಂಡಿರುವ ನಗರಸಭೆಯ ಜಾಗದಲ್ಲಿ ರಾಜಾರೋಷವಾಗಿ ವಾಣಿಜ್ಯ ಮಳಿಗೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಆಗಸ್ಟ್ 18ರಂದು ದೂರವಾಣಿ ಮೂಲಕ ಪೌರಾಯುಕ್ತರಿಗೆ ದೂರು ನೀಡಲಾಗಿದೆ. ಯಾವುದೇ ಕ್ರಮ ಜರುಗಿಸಿಲ್ಲ. ಸದರ್ ಬಜಾರ್ ಠಾಣೆಯ ಪಿಎಸ್ಐ ಕೂಡ ಒತ್ತುವರಿದಾರಿಗೆ ಬೆಂಬಲವಾಗಿ ನಿಂತಿದ್ದು, ಪ್ರಶ್ನೆ ಮಾಡಿದವರ ವಿರುದ್ಧವೇ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾರೆ. ಈ ಬಗ್ಗೆಯೂ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರೂ, ಕ್ರಮ ಜರುಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆಪಾದಿಸಿದರು.