ರಾಯಚೂರು: ಆರ್ಟಿಪಿಎಸ್ ಹಾರುಬೂದಿ ಹೊಂಡದಿಂದ ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿದೆ. ಪರಿಸರ ಮತ್ತು ಜನಜೀವನದ ಮೇಲೆ ದುಷ್ಪರಿಣಾಮ ಬೀರದ ರೀತಿಯಲ್ಲಿ ಯಾವುದೇ ಕ್ರಮ ವಹಿಸುತ್ತಿಲ್ಲ. ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ಜೈ ಕನ್ನಡ ರಕ್ಷಣಾ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.