ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಒಪ್ಪಂದದಂತೆ ಜುರಾಲಾ ಜಲಾಶಯ ಯೋಜನೆ ಕೈಗೊಳ್ಳಲಾಗಿತ್ತು. ಮೂರು ಗ್ರಾಮಗಳು ಹಾಗೂ ದೇವಸ್ಥಾನಗಳ ಸ್ಥಳಾಂತರಕ್ಕೆ ಆತ್ಕೂರು, ಬೂರ್ದಿಪಾಡ ಹಾಗೂ ಡಿ.ರಾಂಪುರ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ 2004ರಲ್ಲಿ ಆಂಧ್ರಪ್ರದೇಶ ಸರ್ಕಾರ ಸೇತುವೆಗಳ ನಿರ್ಮಾಣಕ್ಕೆ ₹75 ಕೋಟಿ ಅನುದಾನ ನೀಡಿದ್ದು, ಜಿಲ್ಲಾಧಿಕಾರಿ ಖಾತೆಯಲ್ಲಿ ಹಣವಿದೆ. ಟೆಂಡರ್ ಕೂಡ ಕರೆಯಲಾಗಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಶಾಸಕ ಹಾಗೂ ಜಿಲ್ಲಾಧಿಕಾರಿ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.