ರಾಯಚೂರು: ಸೈನಿಕರ ನೇಮಕಾತಿ ರ್ಯಾಲಿಗೆ ಬರುವ ಅಭ್ಯರ್ಥಿಗಳಿಗೆ ಸರ್ಕಾರದಿಂದ ಅಥವಾ ಸರ್ಕಾರೇತರ ಸಂಸ್ಥೆಗಳಿಂದ ಆಹಾರ ಹಾಗೂ ಇತರೆ ವ್ಯವಸ್ಥೆ ಒದಗಿಸಲು ಒತ್ತಾಯಿಸಿ ಪ್ರಧಾನಮಂತ್ರಿಗೆ ಪತ್ರ ನೀಡಲಾಗುತ್ತದೆ ಎಂದು ಈಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಚಂದ್ರಶೇಖರ ಮಿರ್ಜಾಪುರ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಸೇವೆಗೆ ಬರುವ ಅಭ್ಯರ್ಥಿಗಳಿಗೆ ಅನುಕೂಲ ಮಾಡಲು ಇನ್ನುಮುಂದೆ ದೇಶದಲ್ಲಿ ನೇಮಕಾತಿ ರ್ಯಾಲಿ ಎಲ್ಲಿಯೇ ನಡೆದರೂ ವ್ಯವಸ್ಥೆ ಮಾಡಬೇಕು ಎಂದರು.
ಕೃಷಿ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ಈ ರ್ಯಾಲಿಗೆ ಊಟದ ವ್ಯವಸ್ಥೆ ಯಶಸ್ವಿಯಾಗಿ ನಡೆದಿದ್ದು, ಹಲವು ಸಹಕಾರ ನೀಡಿದ್ದಾರೆ. ಸೈನಿಕ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವಕಾಶ ಸಿಕ್ಕರೆ ಪ್ರಧಾನಮಂತ್ರಿ ಭೇಟಿಗೆ ನಿಯೋಗ ತೆರಳಿ ಈ ವಿಷಯದ ಬಗ್ಗೆ ಮಾತನಾಡಲಾಗುತ್ತದೆ ಎಂದು ತಿಳಿಸಿದರು.