ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ಈಗಾಗಲೇ ಸುಗ್ರೀವಾಜ್ಞೆ ಮೂಲಕ ಕಾನೂನುಗಳನ್ನು ನಿಷ್ಕ್ರಿಯಗೊಳಿಸಿವೆ. ಕಾಯ್ದೆ ಬದಲಾವಣೆಗಳ ಉದ್ದೇಶ ಸಾಂಕ್ರಾಮಿಕ ರೋಗದ ಇಡೀ ವೆಚ್ಚ ಮತ್ತು ಬಿಕ್ಕಟ್ಟುಗಳನ್ನು ಕಾರ್ಮಿಕ ವರ್ಗಕ್ಕೆ ವರ್ಗಾಯಿಸುವುದಾಗಿದೆ. ಅತ್ತ ಬಂಡವಾಳಶಾಹಿಗಳ ಹಿತಾಸಕ್ತಿ ಮತ್ತು ಲಾಭ ಮಾಡಿಕೊಡುತ್ತಿದೆ. ಇದರಿಂದ ರೈತರು ಮತ್ತು ಕಾರ್ಮಿಕರಿಗೆ ಸಾಕಷ್ಟು ಅನ್ಯಾಯವಾಗಲಿದೆ ಎಂದರು.