ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಹಾಗೂ ಬಿಜೆಪಿ ಮತಗಳನ್ನು ಸೆಳೆಯಲು ಟಿಪ್ಪು ಸುಲ್ತಾನ ಪರ ಮತ್ತು ವಿರೋಧ ವ್ಯಕ್ತಪಡಿಸುತ್ತಿವೆ. ಹಿಂದೂ–ಮುಸ್ಲಿಂ ಮಧ್ಯೆ ಜಗಳ ಹಚ್ಚುತ್ತಿವೆ. ಟಿಪ್ಪುಸುಲ್ತಾನ ಒಬ್ಬ ಪ್ರಸಿದ್ಧ ಅರಸ; ಮೈಸೂರಿನ ಹುಲಿ ಎಂದು ಬಿರುದು ಪಡೆದಿದ್ದಾರೆ. ಯುದ್ಧದಲ್ಲಿ ಕ್ಷಿಪಣಿ ಬಳಸಿದ ಮೊಟ್ಟ ಮೊದಲ ರಾಜನಾಗಿದ್ದಾನೆ. ಇಂಥವರ ಇತಿಹಾಸ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.