ಸಿಪಿಎಂ ಕೇರಳ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್, ಸಂಸದ ಕರುಣಾಕರನ್, ಪಾಲಿಟ್ ಬ್ಯೂರೋ ಸದಸ್ಯ ಎನ್.ಎ.ಬೇಬಿ ಸೇರಿದಂತೆ ಹಲವು ಪ್ರಮುಖ ನಾಯಕರು ಈ ತಂಡದಲ್ಲಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಮೂಡುಬಿದಿರೆ ಕ್ಷೇತ್ರಗಳಲ್ಲಿ ಚುನಾವಣಾ ತಯಾರಿ ಕುರಿತು ಪಕ್ಷದ ಸ್ಥಳೀಯ ಮುಖಂಡರಿಗೆ ಮಾರ್ಗದರ್ಶನ ನೀಡಿದರು.