ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಬ್ಬೂರು ತಾಲ್ಲೂಕು ಕೇಂದ್ರ ಘೋಷಣೆಗೆ ಒತ್ತಾಯ

Last Updated 19 ಡಿಸೆಂಬರ್ 2019, 12:37 IST
ಅಕ್ಷರ ಗಾತ್ರ

ರಾಯಚೂರು: ದೇವದುರ್ಗಾ ತಾಲ್ಲೂಕಿನಲ್ಲಿ ಅವೈಜ್ಞಾನಿಕವಾಗಿ ಅರಕೇರಾ ಹೋಬಳಿಯನ್ನು ನೂತನ ತಾಲ್ಲೂಕು ಮಾಡಬೇಕೆನ್ನುವ ಪ್ರಸ್ತಾವನೆಯನ್ನು ರದ್ದುಗೊಳಿಸಿ; ಗಬ್ಬೂರು ಹೋಬಳಿಯನ್ನು ತಾಲ್ಲೂಕು ಕೇಂದ್ರ ಎಂದು ಘೋಷಿಸುವಂತೆ ಗಬ್ಬೂರು ಹೋಬಳಿಯ ಪ್ರಗತಿಪರ ಸಂಘಟನೆ ಒಕ್ಕೂಟದ ಸದಸ್ಯ ಮಲ್ಲಪ್ಪಗೌಡ ಮಾಲಿಪಾಟೀಲ ಒತ್ತಾಯಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 50 ಅಧಿಕ ಗ್ರಾಮಗಳನ್ನು ಒಳಗೊಂಡಿರುವ ಗಬ್ಬೂರು ಗ್ರಾಮವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡದೇ, ಶಾಸಕರ ಕ್ಷೇತ್ರವಾದ ಅರಕೇರಾ ಹೋಬಳಿಯನ್ನು ರಾಜಕೀಯ ಒತ್ತಡದಿಂದ ತಾಲ್ಲೂಕು ಕೇಂದ್ರ ಎಂದು ಆದೇಶಿಸುವಂತೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು.

ದೇವದುರ್ಗದಿಂದ ಅರಕೇರಾಕ್ಕೆ 15 ಕಿ.ಮೀ, ಅರಕೇರಾದಿಂದ ಸಿರವಾರ ತಾಲ್ಲೂಕಿಗೆ 15 ಕಿ.ಮೀ. ದೂರವಿದೆ. ದೇವದುರ್ಗದಿಂದ ಗಬ್ಬೂರು ಹೋಬಳಿ 30 ಕಿ.ಮೀ. ಅಂತರ ಇದೆ. ಗಬ್ಬೂರು ಹೋಬಳಿ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಅರಕೇರಾ ಹೋಬಳಿಗೆ ತೆರಳಲು ತುಂಬಾ ತೊಂದರೆಯಾಗುತ್ತದೆ. ಅದಕ್ಕೆ ನೂತನ ತಾಲ್ಲೂಕು ಗಬ್ಬೂರು ಎಂದು ಘೋಷಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ. 15 ದಿನಗಳಲ್ಲಿ ಅರಕೇರಾ ತಾಲ್ಲೂಕು ಕೇಂದ್ರ ಘೋಷಣೆ ಕೈ ಬಿಡಬೇಕು. ಇಲ್ಲದಿದ್ದರೆ ಗಬ್ಬೂರಿನಿಂದ ರಾಯಚೂರಿಗೆ ಪಾದಯಾತ್ರೆ ಮುಖಾಂತರ ಬಂದು ಧರಣಿ ನಡೆಸಲಾಗುವುದು ಎಂದು ತಿಳಿಸಿದರು.

ಬಂದಯ್ಯಸ್ವಾಮಿ ಹಿರೇಮಠ, ಚನ್ನಪ್ಪಗೌಡ ಕಾತರಕಿ, ರಾಮಣ್ಣ, ಶಾಂತಪ್ಪ, ಶಿವುಕುಮಾರ ಗಬ್ಬೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT