<p><strong>ರಾಯಚೂರು:</strong> ನನೆಗುದಿಗೆ ಬಿದ್ದಿರುವ ತಾಲ್ಲೂಕಿನ ಕುರವಕುರ್ದಾ ಪುನರ್ವಸತಿ ಗ್ರಾಮದ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ, ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>ಕುರುವಕುರ್ದಾ ಜನರು ಮತ್ತು ಜಾನುವಾರುಗಳು ಕೃಷ್ಣಾನದಿ ನಡುಗಡ್ಡೆಯಲ್ಲಿ ವಾಸಿಸುತ್ತಿದ್ದಾರೆ. ನಡುಗಡ್ಡೆಯಿಂದ ಹೊರಬರಲು ಸುಮಾರು ₹ 10ಕೋಟಿ ಅಧಿಕ ಮೊತ್ತದ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಿ ಮಾಡಲಾಗಿತ್ತು. ಆದರೆ, ಈ ಸೇತುವೆ ಕಾಮಗಾರಿ ಅರ್ದಕ್ಕೆ ನಿಂತಿದೆ.</p>.<p>ಈ ಸಂಬಂಧ ಜಿಲ್ಲಾಡಳಿತಕ್ಕೆ ಸಾಕಷ್ಟು ಮನವಿ ಸಲ್ಲಿಸಿದರೂ ಇದುವರೆಗೆ ಸ್ಪಂದನೆಯಿಲ್ಲ. ಈಗಲಾದರೂ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಸೇತುವೆ ಕಾಮಗಾರಿಯನ್ನು ಆರಂಬಿಸಿ, ಗ್ರಾಮದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾಧ್ಯಕ್ಷ ವಾಸುದೇವ ಮೇಟಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನನೆಗುದಿಗೆ ಬಿದ್ದಿರುವ ತಾಲ್ಲೂಕಿನ ಕುರವಕುರ್ದಾ ಪುನರ್ವಸತಿ ಗ್ರಾಮದ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ, ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>ಕುರುವಕುರ್ದಾ ಜನರು ಮತ್ತು ಜಾನುವಾರುಗಳು ಕೃಷ್ಣಾನದಿ ನಡುಗಡ್ಡೆಯಲ್ಲಿ ವಾಸಿಸುತ್ತಿದ್ದಾರೆ. ನಡುಗಡ್ಡೆಯಿಂದ ಹೊರಬರಲು ಸುಮಾರು ₹ 10ಕೋಟಿ ಅಧಿಕ ಮೊತ್ತದ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಿ ಮಾಡಲಾಗಿತ್ತು. ಆದರೆ, ಈ ಸೇತುವೆ ಕಾಮಗಾರಿ ಅರ್ದಕ್ಕೆ ನಿಂತಿದೆ.</p>.<p>ಈ ಸಂಬಂಧ ಜಿಲ್ಲಾಡಳಿತಕ್ಕೆ ಸಾಕಷ್ಟು ಮನವಿ ಸಲ್ಲಿಸಿದರೂ ಇದುವರೆಗೆ ಸ್ಪಂದನೆಯಿಲ್ಲ. ಈಗಲಾದರೂ ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಸೇತುವೆ ಕಾಮಗಾರಿಯನ್ನು ಆರಂಬಿಸಿ, ಗ್ರಾಮದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾಧ್ಯಕ್ಷ ವಾಸುದೇವ ಮೇಟಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>