ರಾಯಚೂರು: ನಗರದ ತೀನ್ ಖಂದಿಲ್ ವೃತ್ತದಿಂದ ಅಶೋಕ ಡಿಪೋ ವೃತ್ತದವರೆಗೆ ರಸ್ತೆ ಅಗಲೀಕರಣ ಹಾಗೂ ರಸ್ತೆ ನಿರ್ಮಾಣ, ತರಕಾರಿ ಮಾರುಕಟ್ಟೆಯ ಹಿಂಭಾಗದ ಸ್ವಚ್ಛತೆ, ಎಂ. ಈರಣ್ಣ ವೃತ್ತದ ಬಳಿಯ ಬೊಂಗ ಬಿದ್ದ ಕಾಲುವೆ ಕಾಮಗಾರಿ ಆರಂಭಕ್ಕೆ ವಿಳಂಬಧೋರಣೆ ಮುಂದುವರೆಸಿದ್ದಲ್ಲಿ ನಗರಸಭೆ ಅಧ್ಯಕ್ಷರ ಕಾರ್ಯಾಲಯದ ಮುಂದೆ ಜನವರಿ 18 ರಂದು ಕನ್ನಡಪರ ಸಂಘಟನೆಗಳ ಬೆಂಬಲದೊಂದಿಗೆ ಧರಣಿ ನಡೆಸಲಾಗುವುದು ಎಂದು ರಾಯಚೂರು ಉಸ್ಮಾನಿಯ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್. ಮಹಾವೀರ ಎಚ್ಚರಿಸಿದರು.