<p><strong>ರಾಯಚೂರು:</strong> 2021ರ ಬಜೆಟ್ನಲ್ಲಿ ದೇವದಾಸಿ ವಿಮುಕ್ತ ಮಹಿಳೆಯರಿಗೆ ಮಾಸಿಕ ಸಹಾಯಧನ ₹5 ಸಾವಿರಕ್ಕೆ ಹೆಚ್ಚಿಸಬೇಕು. ಗಣತಿಯಲ್ಲಿ ಬಿಟ್ಟುಹೋದ ಮಹಿಳೆಯರ ಹೆಸರನ್ನು ತಕ್ಷಣವೇ ಹೆಸರು ಸೇರಿಸಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರುಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಕಳೆದ ನಾಲ್ಕು ವರ್ಷಗಳಿಂದ ದೇವದಾಸಿಯರ ವಿವಿಧ ಹಕ್ಕೊತ್ತಾಯಗಳನ್ನು ಬಜೆಟ್ನಲ್ಲಿ ಪರಿಗಣಿಸುತ್ತಿಲ್ಲ. ಮಾಸಿಕ ಸಹಾಯಧನ ಪಿಂಚಣಿಯನ್ನು ಕನಿಷ್ಠ₹5,000 ಗಳಿಗೆ ಹೆಚ್ಚಳ ಮಾಡಲು ಬರೀ ಭರವಸೆ ನೀಡಲಾಗುತ್ತಿದೆ. ಮುಂಬರುವ ಬಜೆಟ್ನಲ್ಲಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ದೇವದಾಸಿ ಮಹಿಳೆಯರ ಮಕ್ಕಳು ಪರಸ್ಪರ ವಿವಾಹವಾದಾಗಲೂ ಪ್ರೋತ್ಸಾಹಧನ ನೀಡಬೇಕು. ವಿವಾಹದ ಪ್ರೋತ್ಸಾಹಧನ ನೀಡುವ ಷರತ್ತುಗಳನ್ನು ಕೈಬಿಡಬೇಕು. ದೇವದಾಸಿ ವಿಮುಕ್ತ ಮಹಿಳೆಯರಿಗೆ ನೀಡುತ್ತಿರುವ ಭೂಮಿಯ ಮಿತಿಯನ್ನು ಕನಿಷ್ಠ 5 ಎಕರೆ ನೀರಾವರಿ ಜಮೀನಿಗೆ ಹೆಚ್ಚಿಸಿ, ಪ್ರತಿ ವರ್ಷ ಪ್ರತಿ ತಾಲ್ಲೂಕಿನ ಕನಿಷ್ಠ 100 ಫಲಾನುಭವಿಗಳಿಗೆ ಜಮೀನು ದೊರೆಯುವಂತೆ ಬಜೆಟ್ನಲ್ಲಿ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಗೌರವಾಧ್ಯಕ್ಷ ಕೆ.ಜಿ ವಿರೇಶ, ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ತಾಲ್ಲೂಕು ಕಾರ್ಯದರ್ಶಿ ಜೆ.ತಾಯಮ್ಮ, ರಂಗಮ್ಮ, ಯಂಕಮ್ಮ, ನರಸಮ್ಮ, ನಾಗಮ್ಮ, ಪಾರ್ವತಮ್ಮ, ಮಹಾದೇವಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> 2021ರ ಬಜೆಟ್ನಲ್ಲಿ ದೇವದಾಸಿ ವಿಮುಕ್ತ ಮಹಿಳೆಯರಿಗೆ ಮಾಸಿಕ ಸಹಾಯಧನ ₹5 ಸಾವಿರಕ್ಕೆ ಹೆಚ್ಚಿಸಬೇಕು. ಗಣತಿಯಲ್ಲಿ ಬಿಟ್ಟುಹೋದ ಮಹಿಳೆಯರ ಹೆಸರನ್ನು ತಕ್ಷಣವೇ ಹೆಸರು ಸೇರಿಸಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರುಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಕಳೆದ ನಾಲ್ಕು ವರ್ಷಗಳಿಂದ ದೇವದಾಸಿಯರ ವಿವಿಧ ಹಕ್ಕೊತ್ತಾಯಗಳನ್ನು ಬಜೆಟ್ನಲ್ಲಿ ಪರಿಗಣಿಸುತ್ತಿಲ್ಲ. ಮಾಸಿಕ ಸಹಾಯಧನ ಪಿಂಚಣಿಯನ್ನು ಕನಿಷ್ಠ₹5,000 ಗಳಿಗೆ ಹೆಚ್ಚಳ ಮಾಡಲು ಬರೀ ಭರವಸೆ ನೀಡಲಾಗುತ್ತಿದೆ. ಮುಂಬರುವ ಬಜೆಟ್ನಲ್ಲಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ದೇವದಾಸಿ ಮಹಿಳೆಯರ ಮಕ್ಕಳು ಪರಸ್ಪರ ವಿವಾಹವಾದಾಗಲೂ ಪ್ರೋತ್ಸಾಹಧನ ನೀಡಬೇಕು. ವಿವಾಹದ ಪ್ರೋತ್ಸಾಹಧನ ನೀಡುವ ಷರತ್ತುಗಳನ್ನು ಕೈಬಿಡಬೇಕು. ದೇವದಾಸಿ ವಿಮುಕ್ತ ಮಹಿಳೆಯರಿಗೆ ನೀಡುತ್ತಿರುವ ಭೂಮಿಯ ಮಿತಿಯನ್ನು ಕನಿಷ್ಠ 5 ಎಕರೆ ನೀರಾವರಿ ಜಮೀನಿಗೆ ಹೆಚ್ಚಿಸಿ, ಪ್ರತಿ ವರ್ಷ ಪ್ರತಿ ತಾಲ್ಲೂಕಿನ ಕನಿಷ್ಠ 100 ಫಲಾನುಭವಿಗಳಿಗೆ ಜಮೀನು ದೊರೆಯುವಂತೆ ಬಜೆಟ್ನಲ್ಲಿ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಗೌರವಾಧ್ಯಕ್ಷ ಕೆ.ಜಿ ವಿರೇಶ, ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ತಾಲ್ಲೂಕು ಕಾರ್ಯದರ್ಶಿ ಜೆ.ತಾಯಮ್ಮ, ರಂಗಮ್ಮ, ಯಂಕಮ್ಮ, ನರಸಮ್ಮ, ನಾಗಮ್ಮ, ಪಾರ್ವತಮ್ಮ, ಮಹಾದೇವಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>