<p><strong>ರಾಯಚೂರು: </strong>ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ, ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಜಿಲ್ಲಾಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.</p>.<p>ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರ ನೇತೃತ್ವದಲ್ಲಿ ಆರಂಭವಾದ ಮೆರವಣಿಗೆಪ್ರಮುಖ ಬೀದಿಗಳಲ್ಲಿಸಂಚರಿಸಿ, ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಪ್ರತಿಭಟಿಸಿಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<p>ಅನುದಾನಿತ ಶಾಲಾ ಕಾಲೇಜುಗಳ ಮಕ್ಕಳಿಗೆ ನೀಡುವ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಅನುದಾನ ರಹಿತ ಶಾಲಾ ಕಾಲೇಜು ಮಕ್ಕಳಿಗೂ ನೀಡಬೇಕು. 1995 ರಿಂದ ಪ್ರಾರಂಭವಾದ ಎಲ್ಲಾ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಹಾಗೂ ಉಪನ್ಯಾಸಕ ವೃಂದಕ್ಕೆ ವೇತನ ಅನುದಾನ ನೀಡಬೇಕು. ಆರ್ ಟಿ ಇ ದಾಖಲಾತಿಯನ್ನು ಮೊದಲಿನಂತೆ ಮುಂದುವರೆಸುವುದು. ಆರ್ಥಿಕವಾಗಿ ಹಿಂದುಳಿದ ಪಾಲಕರ ಮಕ್ಕಳಿಗೆ ಸಾಮಾಜಿಕ ನ್ಯಾಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೀಡುತ್ತಿರುವ ಗೌರವಧನವನ್ನು ₹6,500 ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ₹12,500 ರಂತೆ ಅನುದಾನ ರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಪಾವತಿಸಬೇಕು. ಕಲ್ಯಾಣ ಕರ್ನಾಟಕ ಅನುದಾನ ಅಡಿಯಲ್ಲಿ ಖಾಸಗಿ ಶಾಲೆಗಳ ಮೂಲ ಸೌಕರ್ಯ ಒದಗಿಸಲು ಧನಸಹಾಯ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.</p>.<p>ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿ ಒಕ್ಕೂಟದ ಸಂಚಾಲಕ ರಾಜಾ ಶ್ರೀನಿವಾಸ, ಎನ್.ಎಚ್.ಮುಕ್ಕಣ್ಣ, ಎಸ್.ಎಲ್.ಕೇಶವರೆಡ್ಡಿ, ಮಹಾಂತೇಶ, ಜಂಗಲ್ಲಪ್ಪಗೌಡ, ಬಿ.ಎ.ಕರೀಂಸಾಬ, ಶಂಕರಲಿಂಗಯ್ಯ ಸ್ವಾಮಿ, ನರಸಪ್ಪ ಪಂಚಮುಖಿ, ಮಂಜುನಾಥ, ಪಿ.ಜಿ.ಪವಾರ್, ಶಂಕರಗೌಡ, ಯಮನಪ್ಪ, ನರಸಪ್ಪ ಯಾದವ, ಆಯಯ್ಯ, ನದಾಫ್ ಸೇರಿದಂತೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ, ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಜಿಲ್ಲಾಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.</p>.<p>ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರ ನೇತೃತ್ವದಲ್ಲಿ ಆರಂಭವಾದ ಮೆರವಣಿಗೆಪ್ರಮುಖ ಬೀದಿಗಳಲ್ಲಿಸಂಚರಿಸಿ, ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಪ್ರತಿಭಟಿಸಿಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<p>ಅನುದಾನಿತ ಶಾಲಾ ಕಾಲೇಜುಗಳ ಮಕ್ಕಳಿಗೆ ನೀಡುವ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಅನುದಾನ ರಹಿತ ಶಾಲಾ ಕಾಲೇಜು ಮಕ್ಕಳಿಗೂ ನೀಡಬೇಕು. 1995 ರಿಂದ ಪ್ರಾರಂಭವಾದ ಎಲ್ಲಾ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಹಾಗೂ ಉಪನ್ಯಾಸಕ ವೃಂದಕ್ಕೆ ವೇತನ ಅನುದಾನ ನೀಡಬೇಕು. ಆರ್ ಟಿ ಇ ದಾಖಲಾತಿಯನ್ನು ಮೊದಲಿನಂತೆ ಮುಂದುವರೆಸುವುದು. ಆರ್ಥಿಕವಾಗಿ ಹಿಂದುಳಿದ ಪಾಲಕರ ಮಕ್ಕಳಿಗೆ ಸಾಮಾಜಿಕ ನ್ಯಾಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೀಡುತ್ತಿರುವ ಗೌರವಧನವನ್ನು ₹6,500 ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ₹12,500 ರಂತೆ ಅನುದಾನ ರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಪಾವತಿಸಬೇಕು. ಕಲ್ಯಾಣ ಕರ್ನಾಟಕ ಅನುದಾನ ಅಡಿಯಲ್ಲಿ ಖಾಸಗಿ ಶಾಲೆಗಳ ಮೂಲ ಸೌಕರ್ಯ ಒದಗಿಸಲು ಧನಸಹಾಯ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.</p>.<p>ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿ ಒಕ್ಕೂಟದ ಸಂಚಾಲಕ ರಾಜಾ ಶ್ರೀನಿವಾಸ, ಎನ್.ಎಚ್.ಮುಕ್ಕಣ್ಣ, ಎಸ್.ಎಲ್.ಕೇಶವರೆಡ್ಡಿ, ಮಹಾಂತೇಶ, ಜಂಗಲ್ಲಪ್ಪಗೌಡ, ಬಿ.ಎ.ಕರೀಂಸಾಬ, ಶಂಕರಲಿಂಗಯ್ಯ ಸ್ವಾಮಿ, ನರಸಪ್ಪ ಪಂಚಮುಖಿ, ಮಂಜುನಾಥ, ಪಿ.ಜಿ.ಪವಾರ್, ಶಂಕರಗೌಡ, ಯಮನಪ್ಪ, ನರಸಪ್ಪ ಯಾದವ, ಆಯಯ್ಯ, ನದಾಫ್ ಸೇರಿದಂತೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>