ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಿಗೆ ಶುದ್ಧ ಕುಡಿಯುವ ನೀರು ಮೂಲಸೌಕರ್ಯ ಕಲ್ಪಿಸುವುದು ನಗರಸಭೆಯ ಜವಾಬ್ದಾರಿ. ಆದರೆ ನಗರಸಭೆಯ ಆಡಳಿತ ಮಂಡಳಿ ಶುದ್ಧ ನೀರು ನೀಡುತ್ತಿಲ್ಲ. ಕಲುಷಿತ ನೀರು ಸರಬರಾಜು ಮಾಡಿದ ಪರಿಣಾಮ ಮಂಗಮ್ಮ ಎಂಬ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಸಾವನ್ನಪ್ಪಿದ್ದಾಳೆ. ಈ ಸಾವಿಗೆ ನಗರಸಭೆ ಕಾರಣವಾಗಿದೆ. ನಗರಸಭೆ ಹೊಣೆಹೊತ್ತು ಮಂಗಮ್ಮನ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಹಾಗೂ ಕಲುಷಿತ ನೀರು ಸೇವಿಸಿ ದಾಖಲಾದ ಎಲ್ಲಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕು, ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸಬೇಕು ಎಂದು ಒತ್ತಾಯಿಸಿದರು.