ರಾಯಚೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟದ ಜೊತೆ ವಾರದಲ್ಲಿ 3 ದಿನ ಮೊಟ್ಟೆ ನೀಡುತ್ತಿರುವುದನ್ನು ಆರು ದಿನಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್)ಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪತ್ರಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆಸೋಮವಾರ ಮನವಿ ಸಲ್ಲಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪ್ರಾಥಮಿಕ ಶಾಲೆಗಳಲ್ಲಿ ಸರ್ಕಾರವು ಮಕ್ಕಳಿಗೆ ಮೊಟ್ಟೆ ನೀಡುತ್ತಿರುವುದು ಶ್ಲಾಘನೀಯ. ಮೂರು ದಿನಗಳ ಬದಲಿಗೆ ವಾರದ ಆರು ದಿನಗಳು ಮೊಟ್ಟೆ ವಿತರಿಸಬೇಕು. ಗ್ರಾಮೀಣ ಕೃಷಿ ಕೂಲಿಕಾರ್ಮಿಕರ ಸಂಘಟನೆಯ ಕಾರ್ಯಕರ್ತರು ಸುಮಾರು 21 ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಬಹುತೇಕ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಸರ್ಕಾರದ ಮೊಟ್ಟೆ ಯೋಜನೆ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸಹಕಾರಿಯಾಗಿದೆ. ವಾರದಲ್ಲಿ ಆರು ದಿನ ಮೊಟ್ಟೆ ವಿತರಿಸಿ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.