ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ನ್ಯಾ.ಎ.ಜೆ ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದೇ ಸಂಪೂರ್ಣವಾಗಿ ನಿರ್ಲಕ್ಷ್ಯವಹಿಸಿದ್ದಾರೆ. ಮಾದಿಗ ಸಮುದಾಯ ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಾಗೂ ಉದ್ಯೋಗಳಿಂದ ವಂಚಿತವಾಗುತ್ತಿದೆ. ಒಳಮೀಸಲಾತಿಯ ವರದಿಯ ಸಿದ್ಧವಾಗಿದೆ. ಜಾರಿಯಾಗಲು ಸರ್ಕಾರದ ಮಟ್ಟದಲ್ಲಿದೆ. ಈ ವರದಿಯಲ್ಲಿ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸ್ಥಿತಿಗತಿಗಳ ಅಧ್ಯಯನದಿಂದ ಜಾತಿ ಜನಸಂಖ್ಯೆವಾರು ಮೀಸಲಾತಿಯು ಕಲ್ಪಿಸಲಾಗಿದೆ. ಆದರೆ, ಕೆಲವು ಸ್ಪಶ್ಯ ಜಾತಿಗಳು ಸದಾಶಿವ ಆಯೋಗದ ವರದಿ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದೆ ಎಂದು ಆರೋಪಿಸಿದರು.