<p><strong>ರಾಯಚೂರು: </strong>ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಜೆಟ್ನಲ್ಲಿ ಅಂಗೀಕರಿಸಿ ಯಥಾವತ್ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಮಿತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಧರಣಿ ನಡೆಸಲಾಯಿತು.</p>.<p>ಪಿಟಿಸಿಎಲ್ ಕಾಯ್ದೆಗೆ ಧಕ್ಕೆ ಆಗದಂತೆ ಸೂಕ್ತ ತಿದ್ದುಪಡಿಗಳನ್ನು ಮಾಡಬೇಕು. ದಲಿತರ ಸೇವೆಯನ್ನು ಪರಿಗಣಿಸಿ ಇನಾಂತಿ ಭೂಮಿಯನ್ನು ಮರುಸ್ಥಾಪನೆ ಮಾಡಲು ಆದೇಶ ನೀಡಿ ಸ್ವಾಧೀನಪಡಿಸಿಕೊಳ್ಳಬೇಕು. ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತರಿಗೆ ಸಂವಿಧಾನದ ಶೆಡ್ಯೂಲ್–9 ರ ಅಡಿ ಮೀಸಲಾತಿ ಕಲ್ಪಿಸಲಾಗಿದೆ. ಇದರಲ್ಲಿ ಒಳಮೀಸಲಾತಿ ತರಲು ಪ್ರತ್ಯೇಕ ಆಯೋಗ ರಚಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.</p>.<p>ಬಗರ ಹುಕಂ ಸಕ್ರಮ ಪ್ರಕ್ರಿಯೆಯಲ್ಲಿ ದಲಿತರಿಗೆ ನಿಯಮಾನುಸಾರ ಭೂಮಿ ನೀಡಬೇಕು. ಎಸ್ಸಿಪಿ, ಎಸ್ಟಿಪಿ ಅನುದಾನ ವೆಚ್ಚ ಮಾಡದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ₹50 ಲಕ್ಷ ಮಿತಿ ಮಾಡಿರುವುದರಿಂದ ದಲಿತ ಗುತ್ತಿಗೆದಾರರಿಗೆ ತೊಂದರೆ ಅಗುತ್ತಿದ್ದು, ಇದನ್ನು ಸಡಿಲಗೊಳಿಸಿ ಟೆಂಡರ್ಗಳಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಕೇಳಿಕೊಳ್ಳಲಾಗಿದೆ.</p>.<p>ಪದಾಧಿಕಾರಿಗಳ ಹನುಮಂತಪ್ಪ ಕಾಕರಗಲ್, ಸುರೇಶ ಬಳಗಾನೂರ, ಹನುಮಂತಪ್ಪ ವೆಂಕಟಾಪುರ, ಚಿನ್ನಪ್ಪ ಪಟ್ಟದಕಲ್, ಮಹಾದೇವಪ್ಪ ದುಮತಿ, ಜೆ.ಸತ್ಯನಾಥ, ಕೆ.ನಲ್ಲಾರೆಡ್ಡಿ ನಾಯಕ, ಹೈದರಅಲಿ, ಹನುಮಂತ ಮ್ಯಾತ್ರಿ, ಶಿವಪ್ಪ ಪಲಕನಮರಡಿ, ಮಹಾದೇವ ಪರಾಂಪುರ, ಅಮರನಾರ ಉದ್ಭಾಳ, ಈರಣ್ಣ ಕವಿತಾಳ, ಚಂದ್ರಶೇಖರ್ ಭಂಡಾರಿ, ಶಿವರಾಜ ಕೋರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಜೆಟ್ನಲ್ಲಿ ಅಂಗೀಕರಿಸಿ ಯಥಾವತ್ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಮಿತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಧರಣಿ ನಡೆಸಲಾಯಿತು.</p>.<p>ಪಿಟಿಸಿಎಲ್ ಕಾಯ್ದೆಗೆ ಧಕ್ಕೆ ಆಗದಂತೆ ಸೂಕ್ತ ತಿದ್ದುಪಡಿಗಳನ್ನು ಮಾಡಬೇಕು. ದಲಿತರ ಸೇವೆಯನ್ನು ಪರಿಗಣಿಸಿ ಇನಾಂತಿ ಭೂಮಿಯನ್ನು ಮರುಸ್ಥಾಪನೆ ಮಾಡಲು ಆದೇಶ ನೀಡಿ ಸ್ವಾಧೀನಪಡಿಸಿಕೊಳ್ಳಬೇಕು. ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತರಿಗೆ ಸಂವಿಧಾನದ ಶೆಡ್ಯೂಲ್–9 ರ ಅಡಿ ಮೀಸಲಾತಿ ಕಲ್ಪಿಸಲಾಗಿದೆ. ಇದರಲ್ಲಿ ಒಳಮೀಸಲಾತಿ ತರಲು ಪ್ರತ್ಯೇಕ ಆಯೋಗ ರಚಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.</p>.<p>ಬಗರ ಹುಕಂ ಸಕ್ರಮ ಪ್ರಕ್ರಿಯೆಯಲ್ಲಿ ದಲಿತರಿಗೆ ನಿಯಮಾನುಸಾರ ಭೂಮಿ ನೀಡಬೇಕು. ಎಸ್ಸಿಪಿ, ಎಸ್ಟಿಪಿ ಅನುದಾನ ವೆಚ್ಚ ಮಾಡದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ₹50 ಲಕ್ಷ ಮಿತಿ ಮಾಡಿರುವುದರಿಂದ ದಲಿತ ಗುತ್ತಿಗೆದಾರರಿಗೆ ತೊಂದರೆ ಅಗುತ್ತಿದ್ದು, ಇದನ್ನು ಸಡಿಲಗೊಳಿಸಿ ಟೆಂಡರ್ಗಳಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಕೇಳಿಕೊಳ್ಳಲಾಗಿದೆ.</p>.<p>ಪದಾಧಿಕಾರಿಗಳ ಹನುಮಂತಪ್ಪ ಕಾಕರಗಲ್, ಸುರೇಶ ಬಳಗಾನೂರ, ಹನುಮಂತಪ್ಪ ವೆಂಕಟಾಪುರ, ಚಿನ್ನಪ್ಪ ಪಟ್ಟದಕಲ್, ಮಹಾದೇವಪ್ಪ ದುಮತಿ, ಜೆ.ಸತ್ಯನಾಥ, ಕೆ.ನಲ್ಲಾರೆಡ್ಡಿ ನಾಯಕ, ಹೈದರಅಲಿ, ಹನುಮಂತ ಮ್ಯಾತ್ರಿ, ಶಿವಪ್ಪ ಪಲಕನಮರಡಿ, ಮಹಾದೇವ ಪರಾಂಪುರ, ಅಮರನಾರ ಉದ್ಭಾಳ, ಈರಣ್ಣ ಕವಿತಾಳ, ಚಂದ್ರಶೇಖರ್ ಭಂಡಾರಿ, ಶಿವರಾಜ ಕೋರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>