<p><strong>ರಾಯಚೂರು: </strong>ನಗರದ ಆಶಾಪುರ ರಸ್ತೆಯ ಅಮರೇಶ್ವರ ನಗರದ ಬಾಡಿಗೆ ಮನೆಯಲ್ಲಿ ತಾಲ್ಲೂಕಿನ ತುಂಗಭಧ್ರಾ ಕ್ಯಾಂಪ್ ಗ್ರಾಮದ ಇಂದಿರಾ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು.</p>.<p>ನಗರದ ಎಸ್ಬಿಐ ಮುಖ್ಯ ಶಾಖೆಯ ನೌಕರರಾಗಿದ್ದ ಇಂದಿರಾ ಅವರೊಂದಿಗೆ ಅದೇ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಅನೈತಿಕ ಸಂಬಂಧ ಬೆಳೆಸಿದ್ದ. ಗರ್ಭಿಣಿಯಾಗಿದ್ದ ಇಂದಿರಾಳನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿದರು.</p>.<p>ಇಂದಿರಾ ವಾಸವಿದ್ದ ಮನೆಯ ಸಿಸಿಟಿವಿ ಫುಟೇಜ್, ದೂರವಾಣಿ ಸಂಭಾಷಣೆ, ವೈದ್ಯಕೀಯ ದಾಖಲೆ ಪರಿಶೀಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಅಧ್ಯಕ್ಷ ಯಲ್ಲಪ್ಪ ಜಾಲಿಬೆಂಚಿ, ಕಾರ್ಯದರ್ಶಿ ತಿಮ್ಮಪ್ಪ ನಾಯಕ, ಶಿವರಾಜ ಮೇಟಿಗೌಡ, ಗಿರಿಯಪ್ಪ ದಿನ್ನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ನಗರದ ಆಶಾಪುರ ರಸ್ತೆಯ ಅಮರೇಶ್ವರ ನಗರದ ಬಾಡಿಗೆ ಮನೆಯಲ್ಲಿ ತಾಲ್ಲೂಕಿನ ತುಂಗಭಧ್ರಾ ಕ್ಯಾಂಪ್ ಗ್ರಾಮದ ಇಂದಿರಾ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು.</p>.<p>ನಗರದ ಎಸ್ಬಿಐ ಮುಖ್ಯ ಶಾಖೆಯ ನೌಕರರಾಗಿದ್ದ ಇಂದಿರಾ ಅವರೊಂದಿಗೆ ಅದೇ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಅನೈತಿಕ ಸಂಬಂಧ ಬೆಳೆಸಿದ್ದ. ಗರ್ಭಿಣಿಯಾಗಿದ್ದ ಇಂದಿರಾಳನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿದರು.</p>.<p>ಇಂದಿರಾ ವಾಸವಿದ್ದ ಮನೆಯ ಸಿಸಿಟಿವಿ ಫುಟೇಜ್, ದೂರವಾಣಿ ಸಂಭಾಷಣೆ, ವೈದ್ಯಕೀಯ ದಾಖಲೆ ಪರಿಶೀಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.</p>.<p>ಸಂಘದ ಅಧ್ಯಕ್ಷ ಯಲ್ಲಪ್ಪ ಜಾಲಿಬೆಂಚಿ, ಕಾರ್ಯದರ್ಶಿ ತಿಮ್ಮಪ್ಪ ನಾಯಕ, ಶಿವರಾಜ ಮೇಟಿಗೌಡ, ಗಿರಿಯಪ್ಪ ದಿನ್ನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>