ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಖಾತರಿಗೆ ಒತ್ತಾಯ

Last Updated 15 ಜೂನ್ 2020, 14:01 IST
ಅಕ್ಷರ ಗಾತ್ರ

ರಾಯಚೂರು: ಗುತ್ತಿಗೆ ಕಾರ್ಮಿಕರಿಗೆ ಮಾರ್ಚ್ ತಿಂಗಳಿನಿಂದ ಲಾಕ್‌ಡೌನ್ ಅವಧಿಯಲ್ಲಿನ ವೇತನ ಪಾವತಿ ಮಾಡಬೇಕು. ಪಿಎಫ್ ಹಣ ಜಮಾ ಮಾಡಬೇಕು ಎಂದು ಒತ್ತಾಯಿಸಿ ಕಸ್ತೂರಿಬಾ ಗಾಂಧಿ ಬಾಲಿಕಾ ವಿದ್ಯಾಲಯದ (ಕೆಕೆಜಿಬಿವಿ) ಗುತ್ತಿಗೆ ನೌಕರ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಶಿಕ್ಷಣ ಸಚಿವರಿಗೆ ಸೋಮವಾರ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ ಕೆಕೆಜಿಬಿವಿ ಹಾಗೂ ವಿವಿಧ ವಸತಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕೊರೊನಾ ಮಹಾಮಾರಿಯಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಾಗಿದೆ. ಕೆಲವರಿಗೆ 12 ತಿಂಗಳು ವೇತನ ನಿಡಲು ಅನುದಾನ ಲಭ್ಯವಿದೆ. ಅವರೊಂದಿಗೆ ಅರೆಕಾಲಿಕ ಸಿಬ್ಬಂದಿ, ಅಡುಗೆ ಹಾಗೂ ಇತರೆ ಸಿಬ್ಬಂದಿಗಳಿಗೆ ಮೂರು ತಿಂಗಳ ವೇತನ ಹಾಗೂ ಪಡಿತರ ವಿತರಣೆ ಮಾಡಬೇಕು.

ಕಳೆದ ವರ್ಷ ಏಪ್ರಿಲ್ ತಿಂಗಳಿನಿಂದ ಹೆಚ್ಚಳವಾದ ವೇತನ ಪರಿಷ್ಕರಿಸಿ ಬಾಕಿ ಪಾವತಿ ಮಾಡಬೇಕು. ಪ್ರಧಾನಮಂತ್ರಿಯವರ ಆದೇಶದಂತೆ 3 ತಿಂಗಳ ಅವಧಿಯ ಪಿಎಫ್ ಕಂತಿನ ಹಣವನ್ನು ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ರಾಜ್ಯಾಧ್ಯಕ್ಷ ವಿರೇಶ ಎನ್. ಎಸ್, ಲಕ್ಷ್ಮೀ, ಅನುರಾಧ, ನಾಗರತ್ನ, ಮಂಜುಳಾ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT