ರಾಯಚೂರು: ಭೂರಹಿತ ಕೃಷಿಕಾರ್ಮಿಕರು, ಕುಶಲಕರ್ಮಿಗಳು, ಕೃಷಿಕರು, ನಗರಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಸಣ್ಣ ಉದ್ದಿಮೆದಾರರು ಅವಲಂಬಿಸಿರುವ ಆರ್ಥಿಕ ಕ್ಷೇತ್ರವು ಪವಿತ್ರವಾಗಿದ್ದು, ಈ ಆರ್ಥಿಕತೆ ಉಳಿಸಿ ಪ್ರೋತ್ಸಾಹಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಂಗಕರ್ಮಿ ಪ್ರಸನ್ನ ಅವರ ನೇತೃತ್ವದಲ್ಲಿ ಗ್ರಾಮ ಸೇವಾ ಸಂಘ ರಾಯಚೂರು ಘಟಕದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.