<p><strong>ರಾಯಚೂರು: </strong>ತಾಲ್ಲೂಕಿನ ಶಕ್ತಿನಗರ ಗ್ರಾಮದ 1 ಮತ್ತು 2ನೇ ಕ್ರಾಸ್ ಎಸ್ಬಿಟಿ ಕಾಲೋನಿ ಹಾಗೂ ದೇವಸೂಗೂರಿನ ಬಸವನಗುಡಿ ಗ್ರಾಮ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬುಧವಾರ ಪ್ರತಿಭಟನೆ ನಡೆಸಲಾಯಿತು.</p>.<p>ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಶಕ್ತಿನಗರದ 1 ಮತ್ತು 2ನೆ ಕ್ರಾಸ್ ಹಾಗೂ ಬಸವನಗುಡಿ ಹತ್ತಿರ 3,500 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಆರ್ಟಿಪಿಎಸ್ ಹಾರುಬೂದಿಯಿಂದ ಹಲವರು ಕ್ಯಾನ್ಸರ್, ಟಿಬಿ, ಅಸ್ತಮಾ ಮತ್ತಿತರೆ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈ ಗ್ರಾಮಗಳನ್ನು ಸ್ಥಳಾಂತರ ಮಾಡುವಂತೆ ಅನೇಕ ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.</p>.<p>ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿದ್ದರಿಂದ ರಸ್ತೆ ಪಕ್ಕದಲ್ಲಿ ವಾಸಿಸುವ ನೂರಾರು ಕುಟುಂಬಗಳು ಬೀದಿ ಪಾಲಾಗುತ್ತವೆ. ಇದರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಥಳಕ್ಕೆ ನೀಡಿ ಪರಿಶೀಲಿಸಿ ಸ್ಥಳಾಂತರ ಮಾಡುವ ಭರವಸೆ ನೀಡಿದ್ದರೂ ಈವರೆಗೆ ಈಡೇರಿಲ್ಲ ಎಂದು ದೂರಿದರು.</p>.<p>ಈಗಲಾದರೂ ಎಚ್ಚೆತ್ತುಕೊಂಡು ಸ್ಥಳಾಂತರ ಮಾಡಬೇಕು. ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ವಾಸುದೇವ ಮೇಟಿ, ತಾಲ್ಲೂಕು ಅಧ್ಯಕ್ಷ ಶಿವಪ್ಪ ಅಲ್ಕೂರ್, ಮೈಲಾರ್, ಬಾನು ಬಿ ಹಾಗೂ ಕಾಲೋನಿ ನಿವಾಸಿಗಳು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ತಾಲ್ಲೂಕಿನ ಶಕ್ತಿನಗರ ಗ್ರಾಮದ 1 ಮತ್ತು 2ನೇ ಕ್ರಾಸ್ ಎಸ್ಬಿಟಿ ಕಾಲೋನಿ ಹಾಗೂ ದೇವಸೂಗೂರಿನ ಬಸವನಗುಡಿ ಗ್ರಾಮ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬುಧವಾರ ಪ್ರತಿಭಟನೆ ನಡೆಸಲಾಯಿತು.</p>.<p>ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಶಕ್ತಿನಗರದ 1 ಮತ್ತು 2ನೆ ಕ್ರಾಸ್ ಹಾಗೂ ಬಸವನಗುಡಿ ಹತ್ತಿರ 3,500 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಆರ್ಟಿಪಿಎಸ್ ಹಾರುಬೂದಿಯಿಂದ ಹಲವರು ಕ್ಯಾನ್ಸರ್, ಟಿಬಿ, ಅಸ್ತಮಾ ಮತ್ತಿತರೆ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈ ಗ್ರಾಮಗಳನ್ನು ಸ್ಥಳಾಂತರ ಮಾಡುವಂತೆ ಅನೇಕ ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.</p>.<p>ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿದ್ದರಿಂದ ರಸ್ತೆ ಪಕ್ಕದಲ್ಲಿ ವಾಸಿಸುವ ನೂರಾರು ಕುಟುಂಬಗಳು ಬೀದಿ ಪಾಲಾಗುತ್ತವೆ. ಇದರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಥಳಕ್ಕೆ ನೀಡಿ ಪರಿಶೀಲಿಸಿ ಸ್ಥಳಾಂತರ ಮಾಡುವ ಭರವಸೆ ನೀಡಿದ್ದರೂ ಈವರೆಗೆ ಈಡೇರಿಲ್ಲ ಎಂದು ದೂರಿದರು.</p>.<p>ಈಗಲಾದರೂ ಎಚ್ಚೆತ್ತುಕೊಂಡು ಸ್ಥಳಾಂತರ ಮಾಡಬೇಕು. ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ವಾಸುದೇವ ಮೇಟಿ, ತಾಲ್ಲೂಕು ಅಧ್ಯಕ್ಷ ಶಿವಪ್ಪ ಅಲ್ಕೂರ್, ಮೈಲಾರ್, ಬಾನು ಬಿ ಹಾಗೂ ಕಾಲೋನಿ ನಿವಾಸಿಗಳು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>