<p><strong>ರಾಯಚೂರು:</strong> ದ್ವಿತೀಯ ಪಿ.ಯು ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲಾಮಟ್ಟದಲ್ಲಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.</p>.<p>ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಸಮಿತಿ ನಿಡಿದ ಮನವಿಗೆ ಸ್ಪಂದಿಸಿ ಜಿಲ್ಲಾ ಮಟ್ಟದಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ಆಶ್ವಾಸನೆ ನೀಡಿದ್ದಾಯಿತು. ಪ್ರಸ್ತುತ ಕೋವಿಡ್ -19 ಹರಡುತ್ತಿರುವ ಸಂದರ್ಭದಲ್ಲಿ ಜೀವ ಅಂಗೈಯಲ್ಲಿಟ್ಟುಕೊಂಡು ಬದುಕುವ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಬೆಂಗಳೂರು , ಬೆಳಗಾವಿ , ಧಾರವಾಡ , ಮಂಗಳೂರು, ಕಲಬುರಗಿ ಮತ್ತಿತರೆ ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು ಉನ್ಯಾಸಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.</p>.<p>ಅಲ್ಲದೇ ಸಮರ್ಪಕವಾದ ಸಾರಿಗೆ ವ್ಯವಸ್ಥೆ, ಊಟ, ವಸತಿ ವ್ಯವಸ್ಥೆ ಇಲ್ಲದಿರುವುದರಿಂದ ಅಪಾಯಯ ಪರಿಸ್ಥಿತಿ ಇದೆ, ಆದ್ದರಿಂದ ಪ್ರಸ್ತುತ -2020 ರ ವರ್ಷದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಮಿತಿಯ ಜಿಲ್ಲಾಧ್ಯಕ್ಷ ನರಸಪ್ಪ ಭಂಡಾರಿ, ಗೋವರ್ಧನ್ ರೆಡ್ಡಿ, ಶರಣಪ್ಪ ಪಾಟೀಲ್, ಮಂಜುನಾಥ್ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ದ್ವಿತೀಯ ಪಿ.ಯು ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳನ್ನು ಜಿಲ್ಲಾಮಟ್ಟದಲ್ಲಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.</p>.<p>ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಸಮಿತಿ ನಿಡಿದ ಮನವಿಗೆ ಸ್ಪಂದಿಸಿ ಜಿಲ್ಲಾ ಮಟ್ಟದಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ಆಶ್ವಾಸನೆ ನೀಡಿದ್ದಾಯಿತು. ಪ್ರಸ್ತುತ ಕೋವಿಡ್ -19 ಹರಡುತ್ತಿರುವ ಸಂದರ್ಭದಲ್ಲಿ ಜೀವ ಅಂಗೈಯಲ್ಲಿಟ್ಟುಕೊಂಡು ಬದುಕುವ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಬೆಂಗಳೂರು , ಬೆಳಗಾವಿ , ಧಾರವಾಡ , ಮಂಗಳೂರು, ಕಲಬುರಗಿ ಮತ್ತಿತರೆ ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು ಉನ್ಯಾಸಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.</p>.<p>ಅಲ್ಲದೇ ಸಮರ್ಪಕವಾದ ಸಾರಿಗೆ ವ್ಯವಸ್ಥೆ, ಊಟ, ವಸತಿ ವ್ಯವಸ್ಥೆ ಇಲ್ಲದಿರುವುದರಿಂದ ಅಪಾಯಯ ಪರಿಸ್ಥಿತಿ ಇದೆ, ಆದ್ದರಿಂದ ಪ್ರಸ್ತುತ -2020 ರ ವರ್ಷದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಮಿತಿಯ ಜಿಲ್ಲಾಧ್ಯಕ್ಷ ನರಸಪ್ಪ ಭಂಡಾರಿ, ಗೋವರ್ಧನ್ ರೆಡ್ಡಿ, ಶರಣಪ್ಪ ಪಾಟೀಲ್, ಮಂಜುನಾಥ್ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>